ನೆಟ್ವರ್ಕ್ ಸಮಸ್ಯೆ ಪರಿಹರಿಸುವಂತೆ ಸಂಸದರಿಂದ ಬಿಎಸ್‌ಎನ್‌ಎಲ್‌ ನಿಗಮದ ಆಡಳಿತ ನಿರ್ದೇಶಕರಿಗೆ ಮನವಿ

0

ಪುತ್ತೂರು : ಕರಾವಳಿಯ, ಮಲೆನಾಡು ಭಾಗದ ನೆಟ್‌ವರ್ಕ್‌ ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ಕರಾವಳಿಯ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಮತ್ತು ಕೋಟ ಶ್ರೀನಿವಾಸ ಪೂಜಾರಿ ಅವರು ಹೊಸದಿಲ್ಲಿಯಲ್ಲಿ ಬಿಎಸ್‌ಎನ್‌ಎಲ್‌ ನಿಗಮದ ಆಡಳಿತ ನಿರ್ದೇಶಕ ಹಾಗೂ ಅಧ್ಯಕ್ಷ ರಾಬರ್ಟ್‌ ರವಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

 ಈಗ ಇರುವ ಸುಮಾರು 400ಕ್ಕೂ ಹೆಚ್ಚು ಬಿಎಸ್‌ಎನ್‌ಎಲ್‌ ಟವರ್‌ಗಳು ಮೂಲಭೂತ ಸೌಕರ್ಯ ಕೊರತೆಯಿಂದಾಗಿ ಮೊಬೈಲ್‌ ಬಳಕೆದಾರರಿಗೆ ಸಂಪರ್ಕದ ಕೊರತೆ ಕಾಡುತ್ತಿದೆ. ಉಭಯ ಜಿಲ್ಲೆಯ ಎಲ್ಲಾ ಬಿಎಸ್‌ಎನ್‌ಎಲ್‌ ಟವರ್‌ಗಳ ಪುನಶ್ಚೇತನಕ್ಕೆ ಅಗತ್ಯವಾದ ತಾಂತ್ರಿಕ ಉಪಕರಣಗಳನ್ನು ಕೂಡಲೇ ಸರಬರಾಜು ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ರಾಬರ್ಟ್‌ ರವಿ ಯವರು ಈ ಎಲ್ಲ ಸಮಸ್ಯೆಗಳನ್ನು ಗಮನಿಸಿ 20 ದಿವಸಗಳ ಒಳಗಡೆ ಎಲ್ಲ ತಾಂತ್ರಿಕ ಉಪಕರಣ ಮತ್ತು ಆರ್ಥಿಕ ಸಹಕಾರವನ್ನು ಸರಬರಾಜು ಮಾಡಿ ತುರ್ತು ಕಾಮಗಾರಿ ಕೈಗೆತ್ತಿಕೊಳ್ಳುವುದಾಗಿ ಭರವಸೆ ನೀಡಿದರು.

LEAVE A REPLY

Please enter your comment!
Please enter your name here