ಕೆದಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಜ್ಞಾನದೀಪ ಶಿಕ್ಷಕಿ ಸೌಲಭ್ಯ, ಮಂಜೂರಾತಿ ಪತ್ರ ಹಸ್ತಾಂತರ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ಪೆರ್ನೆ ವಲಯದ ಕೆದಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಸಮುದಾಯಾಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಜ್ಞಾನದೀಪ ಶಿಕ್ಷಕಿ ಸೌಲಭ್ಯವನ್ನು ಒದಗಿಸಲಾಗಿದ್ದು ಇದರ ಮಂಜೂರಾತಿ ಪತ್ರವನ್ನು ಕೆದಿಲ ಎ ಕಾರ್ಯಕ್ಷೇತ್ರದ ಒಕ್ಕೂಟದ ಅಧ್ಯಕ್ಷರಾದ ಈಶ್ವರ ಸಪಲ್ಯರವರು ಶಾಲಾ ಮುಖ್ಯೋಪಾಧ್ಯಾಯಿನಿ ಬಬಿತಾರವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಸುಬ್ರಾಯ ಭಟ್ ಅಂಡೆಪುಣಿ, ಸುಬ್ರಹ್ಮಣ್ಯ ಭಟ್ ಬೀಟಿಕೆ, ವಲಯ ಮೇಲ್ವಿಚಾರಕರಾದ ಶಾರದಾ ಎ, ಜ್ಞಾನದೀಪ ಶಿಕ್ಷಕಿ ಪವಿತ್ರಾ ಹಾಗೂ ಸೇವಾಪ್ರತಿನಿಧಿ ಶಾರದಾ ಕೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here