ಅಕ್ಷಯ ಕಾಲೇಜಿನಲ್ಲಿ “ಆಕಾರ್” ಒಂದು ದಿನದ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ

0

ಪುತ್ತೂರು: ಪುತ್ತೂರಿನ ಸಂಪ್ಯದಲ್ಲಿ ಕಾರ್ಯಾಚರಿಸುತಿರುವ ಅಕ್ಷಯ ಕಾಲೇಜಿನಲ್ಲಿ ಉಪನಾಸ್ಯಕರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಒಂದು ದಿನದ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ನಡೆಸಲಾಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಡಿ.ಎಂ ರೆಸಿಡೆನ್ಷಿಯಲ್ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಟಿ.ಕೃಷ್ಣಮೂರ್ತಿಯವರು ಶಿಕ್ಷಕ ಹಾಗು ಶಿಕ್ಷಕೇತರ ಸಿಬ್ಬಂದಿಗಳಿಗೆ ಟೀಮ್ ವರ್ಕ್, ಟೈಮ್ ಮ್ಯಾನೇಜ್ಮೆಂಟ್ ಹಾಗೂ ಕ್ಲಾಸ್ ರೂಮ್ ಮ್ಯಾನೇಜ್ಮೆಂಟ್ ಕುರಿತು ಕಾರ್ಯಾಗಾರ ನಡೆಸಿದರು. ಕಾರ್ಯಾಗಾರದ ಉದ್ಘಾಟನೆಯನ್ನು ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು ಇವರು ಉದ್ಘಾಟಿಸಿ ಶಿಕ್ಷಕರ ಅಭಿವೃದ್ಧಿಗೆ ಇಂತಹ ಕಾರ್ಯಕ್ರಮದ ಅಗತ್ಯವಿದ್ದು ಶಿಕ್ಷಕರು ಇದರ ಸದುಪಯೋಗ ಪಡೆಯಬೇಕೆಂದು ಹಾರೈಸಿದರು.ಕಾಲೇಜಿನ ಆಡಳಿತ ನಿರ್ದೇಶಕಿ ಕಲಾವತಿ ಜಯಂತ್ ಉಪಸ್ಥಿತರಿದ್ದರು. ಉಪನ್ಯಾಸಕಿ ಮೇಘಶ್ರೀ ಪ್ರಾರ್ಥಿಸಿ ,ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಸ್ವಾಗತಿಸಿ, ಆಡಳಿತಾಧಿಕಾರಿ ಅರ್ಪಿತ್ ಟಿ ಎ ವಂದಿಸಿ ,ಉಪನ್ಯಾಸಕರಾದ ರಾಕೇಶ್ ಕೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here