ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಜೈರಾಜ್ ಭಂಡಾರಿ ವಿದೇಶ ಪ್ರವಾಸ- ಬೀಳ್ಕೊಡುಗೆ

0

ಪುತ್ತೂರು: ಪುತ್ತೂರು ದರ್ಬೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಜೈರಾಜ್ ಭಂಡಾರಿ ನೋಣಾಲುರವರು ಜು.26ರಂದು ವಿದೇಶ ಪ್ರವಾಸ ಕೆನಾಡಕ್ಕೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಸಂಘದ ಆಡಳಿತ ಮಂಡಳಿಯಲ್ಲಿ ಅವರಿಗೆ ಶುಭ ಹಾರೈಸಿ ಬೀಳ್ಕೊಡಲಾಯಿತು.


ಜು.25ರಂದು ನಡೆದ ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಸಂಘದ ಅಧ್ಯಕ್ಷ ಸಹಕಾರ ರತ್ನ ಕೆ.ಸೀತಾರಾಮ ರೈ ಸವಣೂರುರವರು ಶುಭ ಹಾರೈಸಿ ವಿದೇಶ ಪ್ರಯಾಣ ಸುಖಕರವಾಗಿರಲಿ ಎಂದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎನ್ ಸುಂದರ ರೈ ಸವಣೂರು, ಸಂಘದ ಎಲ್ಲಾ ನಿರ್ದೇಶಕರುಗಳು, ಮಹಾಪ್ರಬಂಧಕರು ಮತ್ತು ಉಪ ಮಹಾಪ್ರಬಂಧಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here