ಕಟ್ಟಡದಿಂದ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ರಮೇಶ್ ಆಚಾರ್ಯ ನಿಧನ

0

ಪುತ್ತೂರು: ವಾರದ ಹಿಂದೆ ಕಟ್ಟಡದಿಂದ ಬಿದ್ದು ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಬೊಳುವಾರು ಕರ್ಮಲ ನಿವಾಸಿ ಕೂಲಿ ಕಾರ್ಮಿಕರೊಬ್ಬರು ಚಿಕಿತ್ಸೆಗೆ ಸ್ಪಂಧಿಸದೆ ಜು.25ರಂದು ಅಸ್ಪತ್ರೆಯಲ್ಲಿ ನಿಧನರಾದರು.


ಬೊಳುವಾರು ಕರ್ಮಲ ದಿ ನಾರಾಯಣ ಆಚಾರ್ಯ ಎಂಬವರ ಪುತ್ರ ರಮೇಶ್ ಆಚಾರ್ಯ(58ವ)ರವರು ಮೃತಪಟ್ಟವರು. ಅವರು ವಾರದ ಹಿಂದೆ ಬೊಳುವಾರಿನಲ್ಲಿ ಕಟ್ಟಡವೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಗಾಯಗೊಂಡಿದ್ದರು. ಗಾಯಗೊಂಡ ಅವರನ್ನು ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಚಂದ್ರಾವತಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಜು.26ರಂದು ಮೃತರ ಅಂತ್ಯಕ್ರೀಯೆ ನಡೆಯಲಿದೆ ಎಂದು ಸ್ಥಳೀಯರಿಂದ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here