ಕೊಂಬೆಟ್ಟು ಶಾಲೆಯಲ್ಲಿ ಕಾರ್ಗಿಲ್ ವಿಜಯೋತ್ಸವ, ಯೋಧರಿಗೆ ನಮನ

0

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಿಂದ ಜು.26ರಂದು ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧರಿಗೆ ನಮನ ಕಾರ್ಯಕ್ರಮ ನಡೆಯಿತು.
ಶಾಲೆಯ ಹಿರಿಯ ವಿದ್ಯಾರ್ಥಿ ಎನ್.ಸಿ.ಸಿ ಕೆಡೆಟ್ ಆಗಿದ್ದ ಕಾರ್ಗಿಲ್ ಯೋಧ ಹುತಾತ್ಮ ಪರಮೇಶ್ವರ ಗೌಡ ಅವರ ಪತ್ನಿ ಪುಷ್ಪಾವತಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸುವ ಮೂಲಕ ಯೋಧರಿಗೆ ನಮನ ಕಾರ್ಯಕ್ರಮ ನಡೆಯಿತು.

ಶಾಲಾ ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ಜೋಕಿಮ್ ಡಿಸೋಜ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ನಾವು ಯಾವತ್ತೂ ಕೂಡಾ ನಮ್ಮ ಯೋಧರಿಗೆ ಚಿರಋಣಿಯಾಗಿರಬೇಕೆಂದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗೋಪಾಲ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ನಿಕಟಪೂರ್ವ ಎನ್.ಸಿ.ಸಿ ಅಧಿಕಾರಿ ಗ್ರೆಗೊರಿ ರೋನಿ ಪಾಯ್ಸ್ ಕಾರ್ಯಕ್ರಮ ನಿರ್ವಹಿಸಿದರು. ಐಟಿ.ಶಿಕ್ಷಕ ಆಶ್ಲೇಷ್ ಮತ್ತು ಅಟೋಮೊಬೈಲ್ ಶಿಕ್ಷಕ ಶ್ರೀ ಶಶಿಕುಮಾರ್ ಸಹಕರಿಸಿದರು.

LEAVE A REPLY

Please enter your comment!
Please enter your name here