ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ, ಹನುಮಗಿರಿ ಆಂಜನೇಯ ಕ್ಷೇತ್ರ ಭೇಟಿ ನೀಡಿದ ಹೈಕೋರ್ಟ್ ನ್ಯಾಯಾಧೀಶ ಇ ಎಸ್ ಇಂದಿರೇಶ್

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯಾಧೀಶ ಇ ಎಸ್ ಇಂದಿರೇಶ್ ಅವರು ಜು.27ಕ್ಕೆ ಬೆಳಿಗ್ಗೆ ಭೇಟಿ ನೀಡಿ ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಸಲ್ಲಿಸಿ ದೇವರ ದರುಶನ ಪಡೆದರು.
ನಸುಕಿನ ಜಾವ ಹನುಮಗಿರಿ ಆಂಜನೇಯ ಕ್ಷೇತ್ರಕ್ಕೆ ಭೇಟಿ ನೀಡಿ ಬಳಿಕ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಳದ ಅರ್ಚಕ ಹರೀಶ್ ಭಟ್ ನ್ಯಾಯಾಧೀಶರಿಗೆ ಪ್ರಸಾದ ವಿತರಿಸಿದರು. ಈ ಸಂದರ್ಭ ಪುತ್ತೂರು ನ್ಯಾಯಾಲಯದ ನ್ಯಾಯಾಧೀಶರುಗಳು, ದೇವಳದ ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here