ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

0

ಅಧ್ಯಕ್ಷೆ ಕೃಷ್ಣವೇಣಿಪ್ರಸಾದ್ ಮುಳಿಯ, ಸಂಚಾಲಕ ಉಮೇಶ್ ನಾಯಕ್

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್‌ನ ಸ್ಥಾಪನಾ ದಿನದ ಪ್ರಯುಕ್ತ ಹಲವು ವರ್ಷಗಳಿಂದ ಪುತ್ತೂರುನಲ್ಲಿ ವಿಜೃಂಭಣೆಯಿಂದ ನಡೆಯುವ ’ಪುತ್ತೂರು ಮೊಸರು ಕುಡಿಕೆ ಉತ್ಸವ’ ಕಾರ್ಯಕ್ರಮದ 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಕೃಷ್ಣವೇಣಿ ಪ್ರಸಾದ್ ಮುಳಿಯ, ಸಂಚಾಲಕರಾಗಿ ಪುತ್ತೂರು ಉಮೇಶ್ ನಾಯಕ್, ಕಾರ್ಯದರ್ಶಿಯಾಗಿ ಜಗದೀಶ್ ನಿರ್ಪಾಜೆ, ಕೋಶಾಧಿಕಾರಿಯಾಗಿ ಹರೀಶ್ ಕುಮಾರ್ ದೋಳ್ಪಾಡಿ ಆಯ್ಕೆಯಾಗಿದ್ದಾರೆ.
ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಅಯ್ಕೆ ಪ್ರಕ್ರಿಯೆ ನಡೆದಿದೆ. ಉಪಧ್ಯಾಕ್ಷರುಗಳಾಗಿ ನ್ಯಾಯವಾದಿ ವಿರೂಪಾಕ್ಷ ಭಟ್ ಮಚ್ಚಿಮಲೆ, ವಿ ಪ್ರಭಾವತಿ ಬೊಳುವಾರು, ಸಚಿನ್ ಶೆಣೈ, ಮೋಹನ್ ಅತ್ಲಾಜೆ ಆಯ್ಕೆಯಾಗಿದ್ದಾರೆ, ಸಹ ಕಾರ್ಯದರ್ಶಿಗಳಾಗಿ ಜೀವನ್ ಆಚಾರ್ಯ ಬಲ್ನಾಡು, ಅನಿಲ್ ಇರ್ದೆ, ಶರಾವತಿ ರವಿನಾರಾಯಣ, ಶ್ರೀದೇವಿ ಪುತ್ತೂರು ಮತ್ತು ಸಹಕೋಶಾಧಿಕಾರಿಗಳಾಗಿ ಸಂದೀಪ್ ಸಿಂಗಾಣಿ, ಶೈಲೇಶ್ ನೈತಾಡಿರವರು ಆಯ್ಕೆಗೊಂಡಿದ್ದಾರೆ. ಆಯ್ಕೆ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಪದಾಧಿಕಾರಿಗಳು, ಪ್ರಖಂಡದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here