ಕುಂಬ್ರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಅಪಾಯದಿಂದ ಪಾರಾದ ಪ್ರಯಾಣಿಕರು, ಕಾರು ಜಖಂ

0

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಪೇಟೆಯಲ್ಲಿ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿರುವ ಘಟನೆ ಜು.28ರಂದು ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕುಂಬ್ರ ಸಿ.ಎ ಬ್ಯಾಂಕ್ ಮುಂಭಾಗದಲ್ಲಿ ರಸ್ತೆಯ ಬದಿಯ ಕಬ್ಬಿಣದ ತಡೆ ಬೇಲಿಗೆ ಕ್ರೇಟಾ ಕಾರು ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದು ಓರ್ವ ಮಹಿಳೆಯ ಮುಖಕ್ಕೆ ಅಲ್ಪ ಗಾಯವಾಗಿರುವುದು ಬಿಟ್ಟರೆ ಯಾವುದೇ ಅಪಾಯ ಸಂಭವಿಸಿಲ್ಲ. ಘಟನೆಯಿಂದ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ರಸ್ತೆ ಬದಿಯ ತಡೆಬೇಲಿ ಮುರಿದು ಚೆಲ್ಲಾಪಿಲ್ಲಿಯಾಗಿದೆ.
ಬೆಂಗಳೂರು ಏರ್‌ಪೋರ್ಟಿಗೆ ಹೋಗು ಮರಳಿ ಮಂಗಳೂರಿಗೆ ಹೋಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಘಟನೆ ನಡೆದ ಸಂದರ್ಭ ಜೋರಾದ ಶಬ್ದ ಕೇಳಿ ಬಂದಿದ್ದು ಸ್ಥಳದಲ್ಲಿ ನೂರಾರು ಮಂದಿ ಜಮಾಯಿಸಿದ್ದರು. ಸಂಪ್ಯ ಪೊಲೀಸ್ ಠಾಣಾ ಸಿಬ್ಬಂದಿ ಈರಣ್ಣ ಸಿ.ಟಿ ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here