ದಾಮೋದರ ಪಾಟಾಳಿ ಅವರಿಗೆ ಕರ್ನಾಟಕ ಸೇವಾ ರತ್ನ ರಾಜ್ಯ ಪ್ರಶಸ್ತಿ

0

ಪುತ್ತೂರು: ಸಮಾಜ ಸೇವಾ ಕ್ಷೇತ್ರದ ಸೇವೆಗಾಗಿ ಬೆಂಗಳೂರಿನ ಸಮಾಜ ಸೇವಾ ಸಂಸ್ಥೆ ಶ್ರೀ ದುರ್ಗಾ ಫೌಂಡೇಶನ್ ಟ್ರಸ್ಟ್ ವತಿಯಿಂದ ನೀಡಲಾಗುವ ಕರ್ನಾಟಕ ಸೇವಾ ರತ್ನ-2024 ರಾಜ್ಯ ಮಟ್ಟದ ಪ್ರಶಸ್ತಿಗೆ ಜೇಸಿಐ ಇದರ ಪೂರ್ವಾಧ್ಯಕ್ಷ ದಾಮೋದರ ಪಾಟಾಳಿಯವರು ಭಾಜನರಾಗಿದ್ದಾರೆ.

ಮುಕ್ರಂಪಾಡಿ ನಿವಾಸಿಯಾಗಿರುವ ದಾಮೋದರ ಪಾಟಾಳಿಯವರು ಪುತ್ತೂರು ಜೇಸಿಐನ ಪೂರ್ವಾಧ್ಯಕ್ಷ, ಪೂರ್ವ ರಾಷ್ಟ್ರೀಯ ಸಂಯೋಜಕರಾಗಿ, ಜೇಸಿ ವಲಯ ತರಬೇತಿದಾರರೂ ಆಗಿದ್ದಾರೆ. ವಿಶ್ವ ಹಿಂದೂ ಪರಿಷತ್ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿದ್ದು, ರೋಟರಿ ಕ್ಲಬ್ ಪುತ್ತೂರು ಬಿರುಮಲೆ ಹಿಲ್ಸ್ ಇದರ ಸ್ಥಾಪಕ ಕಾರ್ಯದರ್ಶಿಯಾಗಿದ್ದಾರೆ. ಮಾರುಕಟ್ಟೆ ವಿಭಾಗದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿದ್ದು, ರಕ್ತದಾನ, ಪರಿಸರ ಕಾರ್ಯಕ್ರಮವನ್ನು ಸಕ್ರಿಯವಾಗಿ ಸಂಘಟಿಸುತ್ತಿದ್ದಾರೆ. ಸುಮಾರು 39ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿರುವ ಇವರು ಪುತ್ತೂರು ವಾಣಿಯನ್ ಗಾಣಿಗ ಸಮಾಜ ಸೇವಾ ಸಂಘದ ಪೂರ್ವ ಅಧ್ಯಕ್ಷರಾಗಿದ್ದು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಪ್ರಸ್ತುತ ನಂದನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇಂದು ಪ್ರಶಸ್ತಿ ಸ್ವೀಕಾರ:
ಜು.29ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ , ನಯನ ಸಭಾಂಗಣದಲ್ಲಿ ನಡೆಯಲಿರುವ ಫೌಂಡೇಶನ್ ನ 5 ನೇ ವಾರ್ಷಿಕೋತ್ಸವ ದಲ್ಲಿ ದಾಮೋದರ ಪಾಟಾಳಿಯವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

LEAVE A REPLY

Please enter your comment!
Please enter your name here