ಅಪಘಾತದ ಗಾಯಾಳುಗಳಿಗೆ ಚಿಕಿತ್ಸೆ – ಮಾನವೀಯತೆ ಮೆರೆದ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಯಧುರಾಜ್

0

ಪುತ್ತೂರು: ಪುತ್ತೂರು ಬೈಪಾಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಅಪಘಾತದಿಂದ ಗಾಯಗೊಂಡಿದ್ದ ವಿದ್ಯಾರ್ಥಿ ಸಹಿತ ಇಬ್ಬರನ್ನು ಆಸ್ಪತ್ರೆಯ ಕರ್ತವ್ಯಕ್ಕೆಂದು ಅದೇ ದಾರಿಯಲ್ಲಿ ಬರುತ್ತಿದ್ದ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಯಧುರಾಜ್ ತನ್ನದೇ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿ ಮಾನವೀಯತೆ ಮೆರೆದ ಘಟನೆ ಜು.29ರಂದು ಬೆಳಿಗ್ಗೆ ನಡೆದಿದೆ.
ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿರುವ ಡಾ.ಯಧುರಾಜ್ ಆಸ್ಪತ್ರೆಗೆ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಆಗ ತಾನೆ ಬೈಪಾಸ್ ತೆಂಕಿಲದಲ್ಲಿ ದ್ವಿಚಕ್ರ ವಾಹನಗಳ ಅಪಘಾತದಿಂದ ಗಾಯಗೊಂಡಿದ್ದ ತೆಂಕಿಲ ವಿವೇಕಾನಂದ ಶಾಲೆಯ ವಿದ್ಯಾರ್ಥಿ ಮತ್ತು ಇನ್ನೂರ್ವ ವ್ಯಕ್ತಿಯನ್ನು ಸಾರ್ವಜನಿಕರು ಉಪಚರಿಸುವುದನ್ನು ಕಂಡು ಬಂದಿದೆ. ತಕ್ಷಣ ಕಾರು ನಿಲ್ಲಿಸಿದ ಅವರು ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಕರ್ತವ್ಯ ನಿಮಿತ್ತ ಸರಕಾರಿ ಆಸ್ಪತ್ರೆಗೆ ಬರುತ್ತಿದ್ದ ಡಾ.ಯಧುರಾಜ್ ಅವರು ಯಾವುದೇ ಇತರ ವಾಹನಗಳಿಗೆ ಕಾಯದೆ ತನ್ನದೇ ಕಾರಿನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದು ಸೂಕ್ತ ಚಿಕಿತ್ಸೆ ನೀಡಿದ್ದು, ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here