ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ರಾವ್ ನಗ್ರಿ ಆಯ್ಕೆ

0

ಆಲಂಕಾರು: ಸೀಮಾ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಕೆ.ಸುಬ್ರಹ್ಮಣ್ಯ ರಾವ್ ನಗ್ರಿ ಯವರು ಆಯ್ಕೆಯಾಗಿದ್ದಾರೆ.ಸಾಮಾನ್ಯ ಸ್ಥಾನದಿಂದ ಸುಬ್ರಹ್ಮಣ್ಯ ರಾವ್ ನಗ್ರಿ , ಪ್ರದಾನ ಆರ್ಚಕರಾದ ಹರಿಪ್ರಸಾದ್ ಉಪಾಧ್ಯಾಯ, ಸಾಮಾನ್ಯ ಸ್ಥಾನಕ್ಕೆ ಪೆರಾಬೆ ಗ್ರಾಮದ ಪರಾರಿಗುತ್ತುನ ರಾಧಾಕೃಷ್ಣ ರೈ,ಪೆರಾಬೆ ಪಟ್ಟೆ ಮನೆಯ ವಿಠಲ ರೈ, ಕುಂತೂರು ಗ್ರಾಮದ ಕೆದ್ದೋಟ್ಟೆ ಮನೆಯ ವಾಸಪ್ಪ ಗೌಡ,ಅಲಂಕಾರು ಗ್ರಾಮದ ನೆಕ್ಕಿಲಾಡಿ ಸೇಸಪ್ಪ ಪೂಜಾರಿ, ಪರಿಶಿಷ್ಟ ಜಾತಿ ಯಿಂದ ಮೋಹನ ಶರವೂರು, ಮಹಿಳೆ ಸ್ಥಾನದಿಂದ ಹಳೇನೆರೆಂಕಿ ಗ್ರಾಮದ ಮರಂಕಾಡಿ ಪುಷ್ಪಲತಾ,ಆಲಂಕಾರು ನೆಡಿಲ ಮನೆಯ ರೋಹಿಣಿಯವರು ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಸಲ್ಲಿಸಿದ್ದು ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ಆದೇಶ ನೂತನ ವ್ಯವಸ್ಥಾಪನಾ ಸಮಿತಿಗೆ ಮಂಜೂರಾಗಿದ್ದು ಜು.28ರಂದು ನಡೆದ ವ್ಯವಸ್ಥಾಪನಾ ಸಮಿತಿಯ ಸಭೆಯಲ್ಲಿ ಕೆ.ಸುಬ್ರಹ್ಮಣ್ಯ ರಾವ್ ನಗ್ರಿಯವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ದೇವಸ್ಥಾನ ಆಡಳಿತಾಧಿಕಾರಿ ಗೋಪಾಲ ರವರು ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೆ. ಸುಬ್ರಹ್ಮಣ್ಯ ರಾವ್ ರವರಿಗೆ ಅಧಿಕಾರ ಹಸ್ತಾಂತರಿಸಿದರು. ಸುಬ್ರಹ್ಮಣ್ಯ ರಾವ್ ರವರು ಆಲಂಕಾರು ಗ್ರಾ.ಪಂ ಅಧ್ಯಕ್ಷರಾಗಿ,ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಎರಡು ಅವಧಿಯಲ್ಲಿ ಧರ್ಮದರ್ಶಿಯಾಗಿ,ಶ್ರೀ ದುರ್ಗಾಂಬಾ ಕಲಾ ಸಂಗಮದ ಅಧ್ಯಕ್ಷರಾಗಿ,ಆಲಂಕಾರು ಸಿ.ಎ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಇದೀಗ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here