ನೆಲ್ಯಾಡಿ ಜೇಸಿ ಪೂರ್ವಾಧ್ಯಕ್ಷ ಇಸ್ಮಾಯಿಲ್ ಅವರಿಗೆ ಜೇಸಿಐ ಸಾಧನಾಶ್ರೀ ಪ್ರಶಸ್ತಿ

0

ನೆಲ್ಯಾಡಿ: ಜೇಸಿಐ ಮಂಗಳೂರು ಶ್ರೇಷ್ಠ ಇದರ ಆತಿಥ್ಯದಲ್ಲಿ ಮಂಗಳೂರಿನಲ್ಲಿ ನಡೆದ ವೈಭವ ವಲಯ ವ್ಯವಹಾರ ಸಮ್ಮೇಳನದಲ್ಲಿ ಸಮಾಜದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ಕೊಡ ಮಾಡುವ ಸಾಧನಾ ಶ್ರೀ ಪ್ರಶಸ್ತಿಯನ್ನು ಜೇಸಿಐ ನೆಲ್ಯಾಡಿಯ ಪೂರ್ವಾಧ್ಯಕ್ಷ ಇಸ್ಮಾಯಿಲ್ ಅವರಿಗೆ ನೀಡಿ ಗೌರವಿಸಲಾಯಿತು.

ಜೇಸಿಐ ಇಂಡಿಯಾ ಪೌಂಡೇಶನ್‌ಗೆ ನೀಡಿರುವ ಕೊಡುಗೆ ಹಾಗೂ ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ನೀಡಿರುವ ಪ್ರೋತ್ಸಾಹ ಪರಿಗಣಿಸಿ ಇಸ್ಮಾಯಿಲ್ ನೆಲ್ಯಾಡಿ ಅವರಿಗೆ ಸಾಧನಾ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ವಲಯಾಧ್ಯಕ್ಷ ಗಿರೀಶ್ ಎಸ್.ಪಿ., ವಲಯ ಉಪಾಧ್ಯಕ್ಷ ಅಭಿಷೇಕ್, ವಲಯ ನಿರ್ದೇಶಕ ರವಿಚಂದ್ರ ಪಾಟಾಳಿ, ಸುನಿಲ್ ಕುಮಾರ್, ನೆಲ್ಯಾಡಿ ಜೆಸಿಐ ಅಧ್ಯಕ್ಷೆ ಸುಚಿತ್ರ ಜೆ ಬಂಟ್ರಿಯಾಲ್, ಪೂರ್ವಾಧ್ಯಕ್ಷರಾದ ಪುರಂದರ ಗೌಡ, ಜಯಾನಂದ ಬಂಟ್ರಿಯಾಲ್, ಮೋಹನ್ ವಿ, ಜೇಸಿ ವಲಯದ ಅಧಿಕಾರಿ ದಯಾಕರ ರೈ, ಜಾಹ್ನವಿ ಐ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here