ನೆಲ್ಯಾಡಿ: ಸಂತಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಎನ್ನೆಸ್ಸೆಸ್ ಘಟಕದ ಸ್ವಯಂಸೇವಕರಿಗೆ ಪುನಶ್ಚೇತನ, ನಾಯಕತ್ವ ತರಬೇತಿ, ಕಾನೂನು ಅರಿವು ಕಾರ್ಯಾಗಾರ

0

ನೆಲ್ಯಾಡಿ: ಇಲ್ಲಿನ ಸಂತಜಾರ್ಜ್ ಪ.ಪೂ.ಕಾಲೇಜಿನ ಎನ್ನೆಸ್ಸೆಸ್ ಘಟಕದ ಸ್ವಯಂ ಸೇವಕರಿಗೆ ಪುನಶ್ಚೇತನ, ನಾಯಕತ್ವ ತರಬೇತಿ ಮತ್ತು ಕಾನೂನು ಅರಿವು ಕಾರ್ಯಗಾರ ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು.

ಸಂತಜಾರ್ಜ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್‌ರವರು ಕಾರ್ಯಗಾರ ಉದ್ಘಾಟಿಸಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನಾ ಸ್ವಯಂ ಸೇವಕರಿಗೆ ನಾನಾ ರೀತಿಯ ತರಬೇತಿಗಳು ದೊರಕುವುದರಿಂದ ಅವರು ಸಮಾಜದಲ್ಲಿ ಉತ್ತಮ ರೀತಿಯ ಜೀವನವನ್ನು ನಡೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಅತಿಥಿಯಾಗಿದ್ದ ನೆಲ್ಯಾಡಿ ಜೆಸಿಐ ಅಧ್ಯಕ್ಷೆ ಸುಚಿತ್ರ ಬಂಟ್ರಿಯಾಲ್‌ರವರು ಮಾತನಾಡಿ, ಎನ್ನೆಸ್ಸೆಸ್ ಘಟಕ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ನಾಯಕತ್ವ ಗುಣವನ್ನು ಬೆಳೆಸುತ್ತದೆ ಮತ್ತು ವಿದ್ಯಾರ್ಥಿಗಳ ಪ್ರತಿಭೆಗೆ ವೇದಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು. ನೋಟರಿ ವಕೀಲರಾದ ಇಸ್ಮಾಯಿಲ್ ನೆಲ್ಯಾಡಿ ಅವರು ಎನ್ನೆಸ್ಸೆಸ್ ಸ್ವಯಂಸೇವಕರಿಗೆ ಕಾನೂನು ಅರಿವು ಕಾರ್ಯಗಾರ ನಡೆಸಿಕೊಟ್ಟರು. ಪೋಕ್ಸೋ ಕಾಯ್ದೆ ಹಾಗೂ ಇನ್ನಿತರ ಕಾನೂನುಗಳ ಬಗ್ಗೆ ತಿಳಿಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಚಾಲಕರಾದ ರೆ.ಫಾ.ನೋಮಿಸ್ ಕುರಿಯಾಕೋಸ್‌ರವರು ಶುಭ ಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಚಾರ್ಯರಾದ ಏಲಿಯಾಸ್ ಎಮ್ ಕೆ, ಎನ್ನೆಸ್ಸೆಸ್ ಘಟಕ ನಾಯಕ ಆಶ್ಲೇಷ್ ಕುಮಾರ್, ನಾಯಕಿ ದೀಕ್ಷಿತ ಉಪಸ್ಥಿತರಿದ್ದರು. ಎನ್ನೆಸ್ಸೆಸ್ ಕಾರ್ಯಕ್ರಮ ಅಧಿಕಾರಿ ವಿಶ್ವನಾಥ ಶೆಟ್ಟಿ ಕೆ ಸ್ವಾಗತಿಸಿದರು. ಎನ್ನೆಸ್ಸೆಸ್ ಸ್ವಯಂಸೇವಕಿ ಗೋಪಿಕ ವಂದಿಸಿದರು. ಜೆ.ಸಿ.ವಿನ್ಯಾಸ್, ಎನ್ನೆಸ್ಸೆಸ್ ಸ್ವಯಂಸೇವಕರು, ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here