ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್ – ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

0

ಉಪ್ಪಿನಂಗಡಿ: ಸರಳಿಕಟ್ಟೆ ಗೆ ಸಂಪರ್ಕ ಕಲ್ಪಿಸುವ ರಸ್ತೆ ಗುಡ್ಡೆ ಕುಸಿದ ಕಾರಣ ಸಂಪೂರ್ಣ ಬಂದ್ ಆಗಿದೆ.
ಬಾರ್ಯ ಗ್ರಾಮದ ಪಂಜುಕ್ಕು ಎಂಬಲ್ಲಿ ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡೆ ಕುಸಿದು ಬಿದ್ದ ಕಾರಣ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬದಲಿ ರಸ್ತೆಯನ್ನು ಪ್ರಯಾಣಿಕರು ಬಳಸುತ್ತಿದ್ದಾರೆ.

ಪಂಜುಕ್ಕು ಪ್ರಯಾಣಿಕರ ತಂಗುದಾಣದ ಬಳಿಯೇ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣಕ್ಕೆ ಯಾವುದೇ ಹಾನಿಯಾಗಿಲ್ಲ. ಗುಡ್ಡ ಕುಸಿತದಿಂದ ವಿದ್ಯುತ್ ಕಂಬಗಳು ಧರೆಗುಳಿದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಉಪ್ಪಿನಂಗಡಿ, ಪುತ್ತೂರು, ಬಿ.ಸಿರೋಡು ತೆರಳುವ ಪ್ರಯಣಿಕರು ಬದಲಿ ರಸ್ತೆ ಬಳಸುವಂತೆ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here