ಉಕ್ಕಿ ಹರಿದ ತೋಡಿನ‌ ನೀರು – ಕಂಬಳಕೋಡಿಯಲ್ಲಿ ಹಲವು ಮನೆಗಳಿಗೆ ಜಲದಿಗ್ಬಂದನ

0

ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯ ಬದಿ ಕಂಬಳಕೋಡಿಯ ಹಲವು ಮನೆಗಳು ಜಲ ದಿಗ್ಭಂದನಕ್ಕೆ ಒಳಗಾಗಿದೆ.ಇಂದು ಸುರಿದ ಭಾರಿ ಮಳೆಯಿಂದಾಗಿ ಪಕ್ಕದ ರಾಜಕಾಲುವೆಯಲ್ಲಿ ನೀರು ಉಕ್ಕಿ ಹರಿದಿದ್ದು ಪಕ್ಕದ ಮನೆಗಳಿಗೆ ನೀರು ನುಗ್ಗಿದೆ. ಶಿಕ್ಷಕ ಶ್ರೀಕಾಂತ್, ನಿವೃತ್ತ ಶಿಕ್ಷಕಿ ವೇದಾವತಿ ಸಹಿತ ಹಲವರ ಮನೆಗಳಿಗೆ ಮಳೆ ನೀರು ನುಗ್ಗಿದೆ. ರಾಜಕಾಲುವೆಗೆ ತಡೆಗೋಡೆ ಇಲ್ಲದಿರುವುದೇ ಕೃತಕ ನೆರೆಗೆ ಕಾರಣವಾಗಿದೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here