ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಇಂದ್ರಕಲಾ ವೈಭವ

0

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಕಾರ್ಯಕ್ರಮ ಇಂದ್ರಕಲಾ ವೈಭವ ಜು.30ರಂದು ಜರಗಿತು. ಇಂದ್ರಪ್ರಸ್ಥ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ಭಟ್‌ ಕಾರ್ಯಕ್ರಮವನ್ನು ದೀಪ ಬೇಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿ ವಿವೇಕಾನಂದ ಇಂಜಿನಿಯರಿಂಗ್‌ ಕಾಲೇಜಿನ ಪ್ರಾಧ್ಯಾಪಕ ಅಕಿರಬರೆ ಶ್ರೀನಿಧಿ ಕೆದಿಲಾಯ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ನಿರಂತರ ಬೆಳವಣಿಗೆಯಲ್ಲಿ ಸಹಕಾರಿಯಾಗುತ್ತವೆ ಎಂದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯ ರಾಜೇಶ್‌ ಪೈ, ಸಂಸ್ಥೆಯ ಪ್ರಾಂಶುಪಾಲ ಹೆಚ್ ಕೆ ಪ್ರಕಾಶ್ ಶುಭಕೋರಿದರು.

ಸಾಂಸ್ಕೃತಿಕ ಕಾರ್ಯಕ್ರದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಭಾಗವಹಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಯಶಸ್ವಿನಿ ಎಮ್ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾದ ವಿಲಸಿನಿ ಕಾರ್ಯಕ್ರಮವನ್ನು ಸ್ವಾಗತಿಸಿ, ಕುಮಾರಿ ಅಮತುನೂರ್‌ ಸಲೀಮ್ ವಂದಿಸಿದರು.

LEAVE A REPLY

Please enter your comment!
Please enter your name here