ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಎಂ.ಮಂಗಳೂರಿಗೆ ವರ್ಗಾವಣೆ-ಪ್ರಭಾರ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ರಾಮಚಂದ್ರ ಎ.

0

ಪುತ್ತೂರು:ಮೆಸ್ಕಾಂನ ಪುತ್ತೂರು ವಿಭಾಗದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿದ್ದ ರಾಮಚಂದ್ರ ಎಮ್‌ರವರು ಮಂಗಳೂರು ಕಾರ್ಪೋರೇಟ್ ಕಚೇರಿಯ ತಾಂತ್ರಿಕ ಶಾಖೆಗೆ ವರ್ಗಾವಣೆಗೊಂಡಿದ್ದಾರೆ.


2022ರ ಮಾರ್ಚ್‌ನಲ್ಲಿ ಪುತ್ತೂರು ವಿಭಾಗಕ್ಕೆ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಬಂಟ್ವಾಳದಿಂದ ವರ್ಗಾವಣೆಗೊಂಡು ಎರಡು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಇದೀಗ ಮಂಗಳೂರು ಕಾರ್ಪೋರೇಟ್ ಕಚೇರಿಗೆ ವರ್ಗಾವಣೆಗೊಂಡಿರುತ್ತಾರೆ.


ರಾಮಚಂದ್ರ ಎಂ.ರವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಪುತ್ತೂರು ನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಎ.ರವರನ್ನು ಹೆಚ್ಚುವರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಮೆಸ್ಕಾಂನ ಪ್ರಧಾನ ವ್ಯವಸ್ಥಾಪಕರು ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here