ಕೈಕಾರ, ಬಿಜತ್ರೆ ಪರಿಸರದಲ್ಲಿ ಅಡಿಕೆ ತೋಟಗಳಿಗೆ ನುಗ್ಗಿದ ಮಳೆ ನೀರು 

0

ಪುತ್ತೂರು : ಕುಂಭದ್ರೋಣ ಮಳೆಗೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜಲಾವೃತಗೊಂಡಿದೆ.  ಕೈಕಾರ , ಬಿಜತ್ರೆ ಪರಿಸರದಲ್ಲಿ ಅಡಿಕೆ ತೋಟಗಳಿಗೆ ನುಗ್ಗಿದ ನೀರು, ಕೃಷಿಗೆ ಅಪಾರ ಹಾನಿಯುಂಟಾಗಿ ರೈತರು ಕಂಗಾಲಾಗಿದ್ದಾರೆ.

ಮಳೆಯಿಂದ ಜಲಾವೃತ ಪ್ರದೇಶಕ್ಕೆ ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ , ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರ ಸಂಚಾಲಕ ರಾಜೇಶ್ ರೈ ಪರ್ಪುಂಜ , ಒಳಮೊಗ್ರು ಗ್ರಾಮ ಪಂಚಾಯತ್ ಸದಸ್ಯ ಮಹೇಶ್ ಕೇರಿ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿದರು.

LEAVE A REPLY

Please enter your comment!
Please enter your name here