ಕಡಬ ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿಯಿಂದ ವರ್ಗಾವಣೆಗೊಂಡ ಎ.ಎಸ್.ಐ. ಹೆಚ್.ಸಿ.ಗಳಿಗೆ ಸನ್ಮಾನ

0

ಕಡಬ: ಇಲ್ಲಿನ ಪೊಲೀಸ್ ಠಾಣೆಯಿಂದ ಸುಳ್ಯ ಠಾಣೆಗೆ ವರ್ಗಾವಣೆಗೊಂಡ ಎ.ಎಸ್.ಐ. ಸುರೇಶ್ ಸಿ.ಟಿ. ಹಾಗೂ ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡ ಹೆಡ್ ಕಾನ್ಸ್‌ಸ್ಟೇಬಲ್ ಭವಿತ್ ರೈಯವರಿಗೆ ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿಯ ವತಿಯಿಂದ ಗೌರವಿಸಿ ಬಿಳ್ಕೋಡಲಾಯಿತು.‌


ಸುರೇಶ್ ಸಿ.ಟಿ. ಹಾಗೂ ಭವಿತ್ ರೈಯವರಿಗೆ ಶಾಲು ಹೊದಿಸಿ ಸನ್ಮಾನಿಸಿ ಶ್ರೀ ದೇವಿಯ ಪ್ರಸಾದ ನೀಡಲಾಯಿತು. ಈ ಸಂದರ್ಭದಲ್ಲಿ ಅರ್ಚಕ ಪ್ರಶಾಂತ್ ಕೆದಿಲಾಯ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ, ಭಜನಾ ಮಂಡಳಿಯ ಅಧ್ಯಕ್ಷ ಸೋಮಪ್ಪ ನಾಯ್ಕ್, ವ್ಯವಸ್ಥಾಪನಾ ಸಮಿತಿಯ ಸದಸ್ಯ ಕಿಶನ್ ಕುಮಾರ್ ರೈ, ಭಜನಾ ಮಂಡಳಿಯ ಕಾರ್ಯದರ್ಶಿ ಮನೋಹರ್ ರೈ ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here