ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೀರು ನುಗ್ಗಿದ ಮನೆಗಳಿಗೆ ಪಟ್ಟಣ ಪಂಚಾಯತ್ ಅಧಿಕಾರಿಗಳ ಭೇಟಿ

0

ವಿಟ್ಲ: ದಿನಗಳ‌ ಹಿಂದೆ ಸುರಿದ ಭಾರೀ ಮಳೆಗೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮನೆಗಳಿಗೆ ಮಳೆ ನೀರು ನುಗ್ಗಿ ಹಾನಿಯಾದ ಪ್ರದೇಶಗಳಿಗೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಮನೆ ಮಾಲೀಕರಿಗೆ ತಿಳುವಳಿಕೆ ಪತ್ರ ನೀಡಿದ್ದಾರೆ.

ಖಾಸಗಿ ವ್ಯಕ್ತಿಗಳು ಸರಿಯಾದ ಚರಂಡಿ ವ್ಯವಸ್ಥೆ ಮಾಡದ ಕಾರಣ ಮನೆಗಳಿಗೆ ನೆರೆ ನೀರು ನುಗ್ಗಿ ಭಾರೀ ಅವಾಂತರ ಸೃಷ್ಟಿಸಿತ್ತು. ಸ್ಥಳಕ್ಕೆ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ಗೋಪಾಲ ನಾಯ್ಕ, 18ನೇ ವಾರ್ಡ್ ಸದಸ್ಯರಾದ ಹಸೈನಾರ್ ನೆಲ್ಲಿಗುಡ್ಡೆ ಭೇಟಿ ನೀಡಿದ್ದು 3 ಮನೆಗಳಿಗೆ ತಿಳುವಳಿಕೆ ಪತ್ರ ನೀಡಿದ್ದಾರೆ. ದಿಢೀರನೆ ಮಳೆ ನೀರು ನುಗ್ಗಿದ್ದು, ಸ್ಥಳೀಯರು ತಕ್ಷಣವೇ ಕಾರ್ಯಾಚರಣೆ ನಡೆಸಿ, ಯಾವುದೇ ಅನಾಹುತ ಸಂಭವಿಸಿದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರು.

LEAVE A REPLY

Please enter your comment!
Please enter your name here