ದ.ಕ.ಜಿಲ್ಲೆಯಲ್ಲಿ ನಿಲ್ಲದ ಮಳೆ-ಶಾಲೆ,ಕಾಲೇಜುಗಳಿಗೆ ಆ.1ರಂದೂ ರಜೆ

0

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ.ಜಿಲ್ಲೆಯಾದ್ಯಂತ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜು ತನಕ ಶಿಕ್ಷಣ ಸಂಸ್ಥೆಗಳಿಗೆ ಆ.1ರಂದೂ ರಜೆ ಮುಂದುವರಿಸಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ.

ಜು.31ರಂದು ಮಧ್ಯಾಹ್ನದ ತನಕ ಮಳೆಯ ಪ್ರಮಾಣ ತುಸು ಇಳಿಕೆಯಾಗಿದ್ದರೂ ಮಧ್ಯಾಹ್ನದ ಬಳಿಕ ಮತ್ತೆ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿಗಳಿಂದ ಸರಕಾರಿ,ಖಾಸಗಿ,ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ದ್ವಿತೀಯ ಪಿಯುಸಿ ಕಾಲೇಜುಗಳಿಗೆ ಆ.1ರಂದೂ ರಜೆ ಮುಂದುವರಿಸಿ ದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here