ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಗಣೇಶೋತ್ಸವ – ಚಪ್ಪರ ಮುಹೂರ್ತ

0

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಗಣೇಶೋತ್ಸವದ ವತಿಯಿಂದ ಸೆ.7 ರಿಂದ 10 ರ ತನಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜರುಗಲಿರುವ ಗಣೇಶೋತ್ಸವಕ್ಕೆ ಚಪ್ಪರ ಮುಹೂರ್ತ ಆ.1 ರಂದು ದೇವಳದ ಎದುರು ಗದ್ದೆಯಲ್ಲಿ ನಡೆಯಿತು.


ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಚಪ್ಪರ‌ ಮುಹೂರ್ತ ನೆರವೇರಿಸಿದರು. ಈ ಸಂದರ್ಭ ಸಮಿತಿ ಗೌರವಾಧ್ಯಕ್ಷ ಡಾ. ಎಂ ಕೆ ಪ್ರಸಾದ್, ಅಧ್ಯಕ್ಷ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷ ರಾಧಾಕೃಷ್ಣ ನಂದಿಲ,ಪ್ರಧಾನ ಕಾರ್ಯದರ್ಶಿ ಅಶೋಕ್ ಕುಂಬ್ಳೆ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ವಿಶ್ವನಾಥ ಗೌಡ ಬನ್ನೂರು, ನೀಲಂತ್ ಬೊಳುವಾರು, ಶ್ರೀನಿವಾಸ ಮೂಲ್ಯ, ಉದಯ ಹೆಚ್, ರಾಜೇಶ್ ಬನ್ನೂರು, ಸುಧೀರ್ ಶೆಟ್ಟಿ, ಅಜಿತ್ ರೈ ಹೊಸಮನೆ, ಕಿರಣ್ ಶಂಕರ್ ಮಲ್ಯ, ಪೂವಪ್ಪ, ಸುಜೀರ್ ಕುಮಾರ್, ಮಲ್ಲೇಶ್ ಆಚಾರ್ಯ, ಚಂದ್ರಶೇಖರ್, ಗೋಪಾಲಕೃಷ್ಣ, ಪೂವಪ್ಪ, ರಾಮಕೃಷ್ಣ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here