ಆ.11: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಯುವ ಬಂಟರ ಸಂಘದಿಂದ ಚಿತ್ರ ಬಿಡಿಸುವ ಸ್ಪರ್ಧೆ

0

ಪುತ್ತೂರು: ಯುವ ಬಂಟರ ಸಂಘ ಪುತ್ತೂರು ನೇತೃತ್ವದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಪುತ್ತೂರು ತಾಲೂಕು ಸಮಿತಿ, ಬಂಟರ ಸಂಘ ಪುತ್ತೂರು ತಾಲೂಕು,ಮಹಿಳಾ ಬಂಟರ ಸಂಘ ಮತ್ತು ವಿದ್ಯಾರ್ಥಿ ಬಂಟರ ಸಂಘ ಇದರ ಸಹಕಾರದೊಂದಿಗೆ ಶ್ರೀ ರಾಮಕೃಷ್ಣ ಫ್ರೌಡ ಶಾಲೆ ಪುತ್ತೂರು ಇದರ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ “ನಿಮ್ಮ ಚಿತ್ತದಲ್ಲಿರುವ ಭವ್ಯ ಭಾರತದ ಸ್ವಾತಂತ್ರ್ಯೋತ್ಸವ ಬಿಳಿ ಹಾಳೆಯಲ್ಲಿ ಬಣ್ಣ ಬಣ್ಣವಾಗಿ ಅರಳಲಿ” ಎನ್ನುವ ಶೀರ್ಷಿಕೆಯಡಿಯಲ್ಲಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದೆ.


ಅ.11 ರಂದು ಆದಿತ್ಯವಾರ ಬೆಳಿಗ್ಗೆ 10 ರಿಂದ ಶ್ರೀ ರಾಮಕೃಷ್ಣ ಫ್ರೌಡ ಶಾಲೆ ಕೊಂಬೆಟ್ಟು ಪುತ್ತೂರು ಇಲ್ಲಿ 1 ರಿಂದ 5 ನೇ ತರಗತಿ ಮತ್ತು 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಎರಡು ವಿಭಾಗದಲ್ಲಿ ಸ್ಪರ್ಧೆಯು ನಡೆಯಲಿದೆ.ಚಿತ್ರ ಬಿಡಿಸುವ ಬಿಳಿ ಹಾಳೆಯನ್ನು ಮಾತ್ರ ಆಯೋಜಕರು ಒದಗಿಸಲಿದ್ದು.ಬಣ್ಣಗಳೊಂದಿಗೆ ಅಗತ್ಯ ಪರಿಕರಗಳನ್ನು ಸ್ಪರ್ಧಿಗಳೇ ತರಲು ಸೂಚಿಸಲಾಗಿದೆ. ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುವುದು ಎಂದು ಯುವ ಬಂಟರ ಸಂಘದ ಅಧ್ಯಕ್ಷ ಹರ್ಷ ಕುಮಾರ್ ರೈ ಮಾಡಾವು ತಿಳಿಸಿದ್ದಾರೆ. ಸ್ಪರ್ಧೆಯ ಹೆಚ್ಚಿನ ಮಾಹಿತಿಗೆ ಶುಭಾ ರೈ-9980961823 , ವಿಜಯಲಕ್ಷ್ಮೀ 8971836829 ಇವರನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here