ಕೈಕಾರ ಶಾಲೆಗೆ ಜ್ಞಾನದೀಪ ಶಿಕ್ಷಕಿ ನೇಮಕ ಮಂಜೂರಾತಿ ಪತ್ರ ಹಸ್ತಾಂತರ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಯೋಜನೆಯಡಿಯಲ್ಲಿ ನಡೆಯುವ ಜ್ಞಾನದೀಪ ಶಿಕ್ಷಕರ ನೇಮಕಾತಿಯಲ್ಲಿ  ಕೈಕಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜ್ಞಾನದೀಪ ಶಿಕ್ಷಕರು ಆಯ್ಕೆಯಾಗಿದ್ದು ಇದರ ಮಂಜೂರಾತಿ ಪತ್ರವನ್ನು  ಬೆಟ್ಟಂಪಾಡಿ ವಲಯ ಮೇಲ್ವಿಚಾರಕ ಸೋಹನ್ ಗೌಡ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ  ಸಿಆರ್ ಪಿ ಶಶಿಕಲಾ, ಒಳಮೊಗ್ರು ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಸದಸ್ಯೆ ರೇಖಾ ಯತೀಶ್, ಎಸ್ಡಿಎಂಸಿ ಅಧ್ಯಕ್ಷೆ ಶೀಲಾವತಿ, ಮುಖ್ಯಗುರು ರಾಮಣ್ಣ ರೈ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here