ಯೋಗಾಸನ ಸ್ಪರ್ಧೆ: ಕಡಬ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಾಂತೀಯ ಮಟ್ಟಕ್ಕೆ ಆಯ್ಕೆ

0

ಕಡಬ: ಸರಸ್ವತೀ ವಿದ್ಯಾಲಯ ವಿದ್ಯಾನಗರ ಕಡಬ ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಪ್ರಾಂತೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿ ರಚನ್ ಡಿ 9ನೇ ತರಗತಿ,ಕಿಶೋರ ವರ್ಗ ಬಾಲಕರ ರಿದಮಿಕ್ ವಿಭಾಗದಲ್ಲಿ ಪ್ರಥಮ ಸ್ಥಾನ, ದೀಪ್ತಿ 9ನೇ ತರಗತಿ ಕಿಶೋರ ವರ್ಗ ವೈಯಕ್ತಿಕ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಮತ್ತು ಹರಿಪ್ರಿಯ ಹರಿದಾಸ್ 8ನೇ ತರಗತಿ ಬಾಲ ವರ್ಗ ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದು ಸಿದ್ದಾಪುರದಲ್ಲಿ ನಡೆಯುವ ಪ್ರಾಂತೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಬಾಲವರ್ಗ ಬಾಲಕಿಯರ ಹಾಗೂ ಕಿಶೋರ ವರ್ಗ ಬಾಲಕಿಯರ ತಂಡ ದ್ವಿತೀಯ ಸಮಗ್ರವನ್ನು ಪಡೆದುಕೊಂಡಿದೆ. ಇವರಿಗೆ ಸಂಸ್ಥೆಯ ಶಿಕ್ಷಕಿ ಜಲಜಾಕ್ಷಿ ಬಿ ವಿ, ಗೀತಾ, ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮೀಶ ಗೌಡ ಆರಿಗ, ಹಿರಿಯ ವಿದ್ಯಾರ್ಥಿಗಳಾದ ಎಸ್ ಸಂಗೀತ ನಾಯಕ್, ಮೋಹಿತ್ ಜೆ ರೈ ಮಾರ್ಗದರ್ಶನ ನೀಡಿದ್ದಾರೆ.

LEAVE A REPLY

Please enter your comment!
Please enter your name here