ಕಡಬ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಾಂತೀಯ ಮಟ್ಟದ ಸ್ಪರ್ಧೆಗೆ ಆಯ್ಕೆ

0

ಕಡಬ: ಕಡಬ ವಿದ್ಯಾನಗರದ ಸರಸ್ವತಿ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ, ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸರಸ್ವತಿ ಆಂಗ್ಲಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ತೇಜಸ್ ಬಾಲವರ್ಗ ಬಾಲಕರ ವೈಯುಕ್ತಿಕ ವಿಭಾಗದಲ್ಲಿ ಐದನೇ ಸ್ಥಾನ, ಪಡೆದು ಸಿದ್ದಾಪುರದಲ್ಲಿ ನಡೆಯುವ ಪ್ರಾಂತೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಬಾಲವರ್ಗ ಬಾಲಕರ ತಂಡ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಇವರಿಗೆ ಸಂಸ್ಥೆಯ ಶಿಕ್ಷಕಿ ಶಿಲ್ಪಾ ಪಿ.ಬಿ , ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ಚಂದ್ರ ಮಾರ್ಗದರ್ಶನ ನೀಡಿದ್ದರು.

LEAVE A REPLY

Please enter your comment!
Please enter your name here