ಆಲಂಕಾರು ಜೇಸಿಐ ಉಪಾಧ್ಯಕ್ಷೆ ವಸಂತಿ ಕನೆಮಾರ್‌ರವರಿಗೆ ಸಾಧನಾಶ್ರೀ ಪ್ರಶಸ್ತಿ

0

ಕಡಬ: ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಜೇಸಿಐ ವಲಯ 15ರ ವ್ಯವಹಾರ ಹಾಗೂ ಅಭಿವೃದ್ಧಿ ಸಮಾವೇಶದಲ್ಲಿ ಜೇಸಿಐ ಆಲಂಕಾರು ಘಟಕದ ಉಪಾಧ್ಯಕ್ಷೆ ವಸಂತಿ ಕನೆಮಾರು ಅವರು ವ್ಯವಹಾರ ಕ್ಷೇತ್ರದ ಅದ್ಭುತ ಸಾಧನೆಗಾಗಿ 2024ನೇ ಸಾಲಿನ ಸಾಧನಾಶ್ರೀ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಉದಯೋನ್ಮುಖ ಮಹಿಳಾ ಉದ್ಯಮಿಯಾಗಿರುವ ಇವರು ತಮ್ಮ ಕೃಷಿ ಕೆಲಸದೊಂದಿಗೆ ವ್ಯವಹಾರ ನಿರ್ವಹಣೆಯನ್ನು ಮಾಡುತ್ತಿದ್ದು ಇತರರಿಗೆ ಮಾದರಿಯಾಗಿರುವ ಕೆಲಸದಲ್ಲಿ ತೊಡಗಿರುವುದನ್ನು ಗುರುತಿಸಿ ಜೇಸಿಐ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ ಜೇಸಿಐ ವಲಯ 15ರ ಅಧ್ಯಕ್ಷ ಗಿರೀಶ್ ಎಸ್.ಪಿ., ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಮುರಳಿ ಶ್ಯಾಂ ಪುತ್ತೂರು, ಜೇಸಿಐ ಆಲಂಕಾರು ಘಟಕದ ಅಧ್ಯಕ್ಷೆ ಮಮತಾ ಅಂಬರಾಜೆ, ವಲಯ ತರಬೇತಿ ವಿಭಾಗದ ನಿರ್ದೇಶಕಿ ಹೇಮಲತಾಪ್ರದೀಪ್, ಆಲಂಕಾರು ಘಟಕದ ಮಹಿಳಾ ವಿಭಾಗದ ಸಂಯೋಜಕಿ ದೇವಕಿ ಹಿರಿಂಜ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here