ಆ.4: ಪಾಣಾಜೆ ತೂಂಬಡ್ಕದಲ್ಲಿ ಕೆಸರ್ ಕಂಡ ಉಚ್ಚಯ-2024

0

ನಿಡ್ಪಳ್ಳಿ: ತುಳುನಾಡ್ ಫ್ರೆಂಡ್ಸ್ ತೂಂಬಡ್ಕ ಪಾಣಾಜೆ ಇದರ ಆಶ್ರಯದಲ್ಲಿ ಆ.4ರಂದು ತೂಂಬಡ್ಕ ಬಾಜುಗುಳಿ ಗದ್ದೆಯಲ್ಲಿ ಕೆಸರ್ಡೊಂಜಿ ದಿನ ಕೆಸರ್ ಕಂಡ ಉಚ್ಚಯ- 2024 ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 9 ಗಂಟೆಗೆ ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಬೊಳಿಲ್ಲಾಯ ಕಾರ್ಯಕ್ರಮ ಉದ್ಘಾಟಿಸಲಿರುವರು. ಕೆ.ಎಂ.ಎಫ್ ನಿರ್ದೇಶಕ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು, ನಿವೃತ್ತ ಸೈನಿಕ ರಮಾನಾಥ ರೈ ಪಡ್ಯಂಬೆಟ್ಟು, ಸೂರಂಬೈಲು ಶಾಲಾ ನಿವೃತ್ತ ಮುಖ್ಯ ಗುರು ಶ್ರೀಧರ ವೈ, ಸ್ಕಂದ ಯುವಕ ಮಂಡಲದ ಅಧ್ಯಕ್ಷ ಮೋಹನ ನಾಯ್ಕ ತೂಂಬಡ್ಕ, ಸ್ಥಳೀಯರಾದ ವೆಂಕಪ್ಪ ನಾಯ್ಕ ಬಾಜುಗುಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.
ಗಂಟೆ 10 ರಿಂದ ದಂಪತಿಗಳಿಗೆ ಉಪ್ಪು ಮೂಟೆ ಓಟ, ಮಕ್ಕಳು, ಪುರುಷರು, ಮಹಿಳೆಯರಿಗೆ ವಿವಿಧ ಸ್ಪರ್ಧೆಗಳು, ಮಧ್ಯಾಹ್ನ ಸಹ ಭೋಜನ ನಡೆಯಲಿದೆ. ಗಂಟೆ 2ರಿಂದ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ.

ಪುತ್ತೂರು ಶಾಸಕ ಅಶೋಕ ಕುಮಾರ್ ರೈ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯೆ ಎಂ.ಎಲ್.ಅಶ್ವಿನಿ ಮೊದಲಾದವರು ಸಂಜೆ ವಿಶೇಷ ಅಹ್ವಾನಿತರಾಗಿ ಭಾಗವಹಿಸಲಿರುವರು ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here