ತಾಲೂಕು ಮಟ್ಟದ ಪ್ರೌಢಶಾಲಾ ವಾಲಿಬಾಲ್ ಪಂದ್ಯಾಟದ ಪೂರ್ವಭಾವಿ ಸಭೆ

0

ಪುತ್ತೂರು: ಸರಕಾರಿ ಪ್ರೌಢಶಾಲೆ ಮಣಿಕ್ಕರ ಇಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟದ ಪೂರ್ವಭಾವಿ ಸಭೆ ಆ.3ರಂದು ನಡೆಸಲಾಯಿತು. ಸಭೆಯಲ್ಲಿ ಗ್ರಾಮಪಂಚಾಯತ್ ಉಪಾಧ್ಯಕ್ಷ ಪ್ರಮೋದ್ ಕೆ ಎಸ್ ಹಾಗೂ ಸದಸ್ಯೆ ಶುಭಲತಾ ಜೆ ರೈ, ಪ್ರಗತಿಪರ ಕೃಷಿಕ, ದಾನಿ ವೆಂಕಪ್ಪ ಗೌಡ ನಾರ್ಕೋಡ್ , ದೈಹಿಕ ಶಿಕ್ಷಣ ನಿರ್ದೇಶಕರು ಅಬುಧಾಬಿಯ ದಿನೇಶ್ ಎನ್ ಸುವರ್ಣ,ಮಾಜಿ ಗ್ರಾಮ ಪಂಚಾಯತ್ ಸದಸ್ಯ ಸುಂದರ ಪೂಜಾರಿ ,ಪಾಲ್ತಾಡು ನಿಕಟಪೂರ್ವ ಕಾರ್ಯಾಧ್ಯಕ್ಷ ಸುನಿಲ್ ರೈ ,ಪಾಲ್ತಾಡ್ ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಸೈಯದ್ ಗಫೂರ್ ಸಾಹೇಬ್ ,ಪ್ರಾಥಮಿಕ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗನ್ನಾಥ ರೈ ಹಾಗೂ ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಅಬ್ದುಲ್ ರಹೀಂ ಮುಖ್ಯ ಶಿಕ್ಷಕಿ ನಳಿನಿ. ಕೆ , ಸದಸ್ಯರು, ಊರ ವಿಧ್ಯಾಭಿಮಾನಿಗಳು, ದಾನಿಗಳು, ವಿವಿಧ ಸಂಘಸಂಸ್ಥೆಗಳ ಅಧ್ಯಕ್ಷರು ಹಾಗೂ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು , ಹಾಗೂ ಶಿಕ್ಷಕರು ಭಾಗವಹಿಸಿದ್ದರು.

ವಿವಿಧ ಸಮಿತಿಗಳನ್ನು ರಚಿಸಿ ಕಾರ್ಯಕ್ರಮದ ರೂಪುರೇಷೆಯನ್ನು ಸಿದ್ಧಪಡಿಸಲಾಯಿತು.ಶಿಕ್ಷಕಿ ವಸಂತಿ ಸ್ವಾಗತಿಸಿ, ಗೀತಾ ಬಿ.ವಿ ವಂದಿಸಿದರು, ದೈಹಿಕ ಶಿಕ್ಷಣ ಶಿಕ್ಷಕ ಕರುಣಾಕರ ಮಣಿಯಾಣಿ ಕಾರ್ಯಕ್ರಮ ನಿರ್ವಹಿಸಿದರು

LEAVE A REPLY

Please enter your comment!
Please enter your name here