ಬಂಟರ ಸಂಘದಿಂದ ಸಮಾಜ ಸೇವಾ ಮಿತ್ರ ಪ್ರಶಸ್ತಿ ಪುರಸ್ಕೃತ ಕುದ್ಕಾಡಿ ಶೀನಪ್ಪ ರೈ ಕೊಡೆಂಕೀರಿಯವರಿಗೆ ಗೌರವಾರ್ಪಣೆ

0

ಪುತ್ತೂರು: ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆ.10ರಂದು ಪುತ್ತೂರು ಬಂಟರ ಭವನದಲ್ಲಿ ನಡೆಯಲಿರುವ ಆಟಿಡೊಂಜಿ ಬಂಟೆರೆ ಸೇರಿಗೆ ಕಾರ‍್ಯಕ್ರಮದಲ್ಲಿ ಮಿತ್ರಂಪಾಡಿ ಚೆನ್ನಪ್ಪ ರೈ ಸ್ಮರಣಾರ್ಥ ಉದ್ಯಮಿ ಜಯರಾಮ ರೈ ಮಿತ್ರಂಪಾಡಿ ಅಬುದಾಬಿ ಇವರಿಂದ ಪ್ರಾಯೋಜಿತ ಸಮಾಜ ಸೇವಾ ಮಿತ್ರ ಪ್ರಶಸ್ತಿ ಪುರಸ್ಕೃತರಾದ ಕುದ್ಕಾಡಿ ಶೀನಪ್ಪ ರೈ ಕೊಡೆಂಕೀರಿರವರಿಗೆ ಅವರ ನಿವಾಸದಲ್ಲಿ ಆ.4 ರಂದು ತಾಲೂಕು ಬಂಟರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರ ನೇತ್ರತ್ವದಲ್ಲಿ ಆಟಿಡೊಂಜಿ ಬಂಟೆರೆ ಸೇರಿಗೆ ಸಮಾರಂಭದ ಆಮಂತ್ರಣವನ್ನು ನೀಡಿ, ಗೌರವಿಸಲಾಯಿತು.


ಸಮಾರಂಭದಲ್ಲಿ ಮಾತೃ ಸಂಘದ ಪುತ್ತೂರು ತಾಲೂಕು ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಸಹಸಂಚಾಲಕ ಸಾಕ ರಾಧಾಕೃಷ್ಣ ಆಳ್ವ, ನಿಕಟಪೂರ್ವ ಸಹಸಂಚಾಲಕ ಜಯಪ್ರಕಾಶ್ ರೈ ನೂಜಿಬೈಲು, ತಾಲೂಕು ಬಂಟರ ಸಂಘದ ಕೋಶಾಧಿಕಾರಿ ಸಂತೋಷ್ ಶೆಟ್ಟಿ ಸಾಜ, ಮಾಜಿ ಕಾರ‍್ಯದರ್ಶಿ ಮೋಹನ್ ರೈ ನರಿಮೊಗರು, ಜೊತೆ ಕಾರ‍್ಯದರ್ಶಿ ಸ್ವರ್ಣಲತಾ ಜೆ. ರೈ, ನಿರ್ದೇಶಕರುಗಳಾದ ದಂಬೆಕ್ಕಾನ ಸದಾಶಿವ ರೈ, ಶಿವನಾಥ ರೈ ಮೇಗಿನಗುತ್ತು, ರವಿಪ್ರಸಾದ್ ಶೆಟ್ಟಿ ಬನ್ನೂರು, ನಿತಿನ್ ಪಕ್ಕಳ, ಯುವ ಬಂಟರ ಸಂಘದ ಅಧ್ಯಕ್ಷ ಹರ್ಷಕುಮಾರ್ ರೈ ಮಾಡಾವು, ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಜಯಕುಮಾರ್ ರೈ ಮಿತ್ರಂಪಾಡಿ, ತಾಲೂಕು ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಗೀತಾ ಮೋಹನ್ ರೈ, ನಿಕಟಪೂರ್ವಾಧ್ಯಕ್ಷೆ ಸಬಿತಾ ಭಂಡಾರಿ, ಅನಿತಾ ಹೇಮನಾತ ಶೆಟ್ಟಿ ಕಾವು, ಜಯಂತಿ ರೈ ಮಾಡಾವು ಹಾಗೂ ಶೀನಪ್ಪ ರೈ ಕೊಡೆಂಕೀರಿರವರ ಮನೆಯವರು ಮತ್ತು ಬಂಧುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here