ಉಪ್ಪಿನಂಗಡಿ: ಗತಿಸಿದ ಹಿರಿಯರಿಗೆ ಸದ್ಗತಿ ಕಾರ್ಯ

0

ಉಪ್ಪಿನಂಗಡಿ: ಆಷಾಢ ಅಮಾವಾಸ್ಯೆಯ ಆದಿತ್ಯವಾರದಂದು ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರನ ಸನ್ನಿಧಿಯಲ್ಲಿ ಅಸಂಖ್ಯಾತ ಭಕ್ತಾದಿಗಳು ಗತಿಸಿದ ಹಿರಿಯರಿಗೆ ಸದ್ಗತಿ ಬಯಸಿ ತಿಲಹೋಮಾದಿ ಪಿಂಡ ಪ್ರಧಾನಗೈದು ಶ್ರೀ ದೇವರಿಗೆ ಪೂಜೆ ನೆರವೇರಿಸಿದರು.


ದಕ್ಷಿಣಕಾಶಿ ಎಂದೇ ಪ್ರಸಿದ್ದವಾಗಿರುವ ನೇತ್ರಾವತಿ ಮತ್ತು ಕುಮಾರಧಾರಾ ನದಿ ಸಂಗಮ ಕ್ಷೇತ್ರವಾಗಿರುವ ಇಲ್ಲಿನ ದೇವಾಲಯಕ್ಕೆ ಆದಿತ್ಯವಾರ ಮುಂಜಾನೆಯಿಂದಲೇ ರಾಜ್ಯ, ಹೊರ ರಾಜ್ಯಗಳಿಂದ ಆಗಮಿಸಿದ ಸಹಸ್ರಾರು ಭಕ್ತಾಧಿಗಳು ಪುರೋಹಿತರ ಮುಖೇನ ತಮ್ಮ ತಮ್ಮ ಗತಿಸಿದ ಹಿರಿಯರಿಗೆ ತಿಲಹೋಮ, ಪಿಂಡ ಪ್ರದಾನವನ್ನು ನೆರೆವೇರಿಸಿದರೆ, ಇನ್ನು ಹಲವರು ನವ ಧಾನ್ಯಗಳನ್ನು ಸಂಗಮ ತಟದಲ್ಲಿ ಗಂಗಾ ಮಾತೆಗೆ ಸಮರ್ಪಿಸಿ ಗತಿಸಿದ ಹಿರಿಯರಿಗೆ ಸದ್ಗತಿ ಬಯಸಿದರು.
ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ನಾಯ್ಕ್ ಮತ್ತವರ ತಂಡದ ಸದಸ್ಯರು ಆಗಮಿಸಿದ ಭಕ್ತಾದಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದರು. ಗೃಹ ರಕ್ಷಕದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡದವರು ನದಿ ಬದಿಗೆ ಬರುವ ಭಕ್ತರ ಸುರಕ್ಷತೆ ನೋಡಿಕೊಂಡರು.

LEAVE A REPLY

Please enter your comment!
Please enter your name here