ರೀಲ್ಸ್ ಸ್ಪರ್ಧೆ ವಿವೇಕಾನಂದ ಪಾಲಿಟೆಕ್ನಿಕ್‌ಗೆ ತೃತೀಯ ಬಹುಮಾನ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಛೇರಿ ಮಂಗಳೂರು ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಛೇರಿ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆಸಿದ ತಾಲೂಕು ಮಟ್ಟದ “ವಿಶ್ವ ಜನಸಂಖ್ಯಾ ದಿನಾಚರಣೆ” 2024-25 ಕಾರ‍್ಯಕ್ರಮಕ್ಕೆ ಸಂಬಧಿಸಿದಂತೆ ನಡೆಸಿದ ರೀಲ್ಸ್ ಸ್ಪರ್ಧೆಯಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರಿನ ಅಂತಿಮ ವರ್ಷದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿಗಳಾದ ಪ್ರತೀಶ್ ಮತ್ತು ಸೃಜನ್ ತೃತೀಯ ಬಹುಮಾನ ಪಡೆದಿರುತ್ತಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here