ಹಳೆನೇರೆಂಕಿ: ಅನಾರೋಗ್ಯದಿಂದ ರಿಕ್ಷಾ ಚಾಲಕ ನಿಧನ

0

ರಾಮಕುಂಜ: ಅನಾರೋಗ್ಯದಿಂದ ರಿಕ್ಷಾ ಚಾಲಕರೊಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಹಳೆನೇರೆಂಕಿ ಗ್ರಾಮದಲ್ಲಿ ಆ.4ರಂದು ನಡೆದಿದೆ.
ಹಳೆನೇರೆಂಕಿ ಗ್ರಾಮದ ಮುಳಿಮಜಲು ನಿವಾಸಿ ಸೂರಪ್ಪ ಗೌಡ (60ವ.)ಮೃತಪಟ್ಟವರಾಗಿದ್ದಾರೆ. ಇವರಿಗೆ ಆ.4ರಂದು ಬೆಳಿಗ್ಗೆ 9 ಗಂಟೆ ವೇಳೆಗೆ ಮನೆಯಲ್ಲಿದ್ದಾಗ ಅನಾರೊಗ್ಯ ಕಾಣಿಸಿಕೊಂಡಿತ್ತು. ತಕ್ಷಣ ಮನೆಯವರು ಆಲಂಕಾರಿನ ಖಾಸಗಿ ಕ್ಲಿನಿಕ್‌ಗೆ ಕರೆದುಕೊಂಡು ಬಂದಿದ್ದರು. ಅಲ್ಲಿನ ವೈದ್ಯರು ಪರಿಕ್ಷೀಸಿ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದರು. ಅದರಂತೆ 108 ಆಂಬುಲೆನ್ಸ್‌ನಲ್ಲಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ಪರಿಕ್ಷೀಸಿದಾಗ ಸೂರಪ್ಪ ಗೌಡ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಮೃತರ ಪುತ್ರ ಶ್ರೀಕಾಂತ ಅವರು ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಗಿರಿಜಾ, ಪುತ್ರರಾದ ಶ್ರೀಕಾಂತ, ಶಶಿಕಾಂತ, ಚಂದ್ರಕಾಂತ, ಪುಷ್ಪಾಕಾಂತ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here