ಬಿಳಿಯೂರು: ನೇಣು ಬಿಗಿದು ಆತ್ಮಹತ್ಯೆ

0

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳಿಯೂರು ಗ್ರಾಮದ ಬಳಪ್ಪು ಎಂಬಲ್ಲಿನ ನಿವಾಸಿ ನಾರಾಯಣ ನಾಯ್ಕ (57.ವ) ಎಂಬವರು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ.


ವಿವಾಹಿತರಾಗಿದ್ದ ಅವರು, ಮಕ್ಕಳಿಲ್ಲದೆ ಇದ್ದು, ಪತ್ನಿಯು ಕಳೆದ ನಾಲ್ಕು ವರ್ಷದ ಹಿಂದೆ ಮೃತಪಟ್ಟ ಬಳಿಕ ಒಬ್ಬಂಟಿಯಾಗಿ ವಾಸವಾಗಿದ್ದರು.

ಇತ್ತೀಚೆಗೆ ಯಾವುದೋ ವಿಷದ ವಸ್ತು ತಾಗಿ ಅವರ ಎರಡೂ ಕಾಲುಗಳು ಕೊಳೆಯಲು ಪ್ರಾರಂಭಿಸಿ ಚಿಕಿತ್ಸೆ ಮಾಡಿದರೂ ಗುಣಮುಖವಾಗದೆ ಇದ್ದಾಗ ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆಯ ಕೋಣೆಯ ಅಡ್ಡಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆಂದು ಮೃತರ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here