ಮೈಸೂರು ಚಲೋ : ಪಾಲ್ತಾಡಿ ಗ್ರಾಮದಿಂದ ಹೊರಟ 58 ಕಾರ್ಯಕರ್ತರನ್ನು ಬೀಳ್ಕೊಟ್ಟ ನಳಿನ್ ಕುಮಾರ್ ಕಟೀಲ್

0

ಸವಣೂರು : ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪನವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧದ “ಮೈಸೂರು ಚಲೋ” ಪಾದಯಾತ್ರೆಯಲ್ಲಿ ಭಾಗವಹಿಸಲು ಹೊರಟ ಪಾಲ್ತಾಡಿ ಗ್ರಾಮದ 58 ಬಿಜೆಪಿ ಕಾರ್ಯಕರ್ತರನ್ನು ನಿಕಟಪೂರ್ವ ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್  ಅವರು  ಜು.6ರಂದು ರಾತ್ರಿ ಕುಂಜಾಡಿಯಲ್ಲಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಜಗದೀಶ್ ಅಧಿಕಾರಿ ಮೂಡಬಿದಿರೆ,  ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ., ಮಂಡಲ ಕಾರ್ಯದರ್ಶಿ ಗಣೇಶ್ ಉದನಡ್ಕ,ಪಾಲ್ತಾಡಿ ಬೂತ್ 70 ರ ಅಧ್ಯಕ್ಷ ಸತೀಶ್ ಅಂಗಡಿಮೂಲೆ, ಕಾರ್ಯದರ್ಶಿ ಪ್ರವೀಣ್ ಕುಮಾರ್, ಬೂತ್ 71 ರ ಅಧ್ಯಕ್ಷ ಜಯಪ್ರಶಾಂತ್, ಸವಣೂರು ಶಕ್ತಿ ಕೇಂದ್ರದ ಪ್ರಮುಖ್ ಚೇತನ್ ಕೋಡಿಬೈಲು, ಸವಣೂರು ಬೂತ್ 65ರ ಕಾರ್ಯದರ್ಶಿ ಸತೀಶ್ ಬಲ್ಯಾಯ, ಬೂತ್ 67 ರ ಅಧ್ಯಕ್ಷ ರಾಜ್‌ದೀಪಕ್ ಶೆಟ್ಟಿ ಮಠ ,ಸವಣೂರು ಗ್ರಾ.ಪಂ.ಸದಸ್ಯರಾದ ತಾರಾನಾಥ ಬೊಳಿಯಾಲ,ಭರತ್ ರೈ, ಹರೀಶ್ ಕಾಯರಗುರಿ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here