ಸೇವಾರತ್ನ ಪ್ರಶಸ್ತಿಗೆ ಭಾಜನರಾದ ಎ ವಿ ನಾರಾಯಣ್ ರಿಗೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿಂದ ಅಭಿನಂದನೆ

0

ಪುತ್ತೂರು: ಮಂಗಳೂರು ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಕಂಪನಿಯ ಸೇವಾರತ್ನ ಪ್ರಶಸ್ತಿ ಗೆ ಭಾಜನರಾಗಿ ಪ್ರಶಸ್ತಿ ಸ್ವೀಕರಿಸಿರುವ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಸ್ಥಾಪಕಾದ್ಯಕ್ಷ ಎ ವಿ ನಾರಾಯಣರಿಗೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ವತಿಯಿಂದ ಶಾಲು,ಹಾರ ಹಾಕಿ ಹೂಗುಚ್ಛ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.

ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಅಧ್ಯಕ್ಷ ಡಿ. ವಿ ಮನೋಹರ್, ಪ್ರಧಾನ ಕಾರ್ಯದರ್ಶಿ ದಿವ್ಯಪ್ರಸಾದ್ ಎ ಎಂ,ಸಲಹಾ ಸಮಿತಿ ಸದಸ್ಯ ಜಿನ್ನಪ್ಪ ಗೌಡ ಮಲುವೇಳು,ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ದಶಮಾನೋತ್ಸವದ ಸಮಿತಿಯ ಅಧ್ಯಕ್ಷ ಗೋಪಾಲಕೃಷ್ಣ ಪಟೇಲ್ ಅಭಿನಂದನಾ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಸಾಲ ಉಸ್ತುವಾರಿ ಶ್ರೀಧರ ಗೌಡ ಕಣಜಾಲು,ಸಲಹಾ ಸಮಿತಿ ಸದಸ್ಯ ವೆಂಕಪ್ಪ ಗೌಡ ದೇವಳಿಕೆ,ವಿವಾಹ ವೇದಿಕೆ ಸಂಚಾಲಕ ಸುರೇಶ್ ಗೌಡ ಕಲ್ಲಾರೆ,ಟ್ರಸ್ಟ್ ನ ಮೆನೇಜರ್ ಸುನೀಲ್ ,ಮೇಲ್ವಿಚಾರಕರು, ಪ್ರೇರಕರು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here