ಆಲಂಕಾರು ಶ್ರೀ ಭಾರತಿ ವಿದ್ಯಾಮಂದಿರದಲ್ಲಿ ಕಡಬ ವಲಯ ಮಟ್ಟದ ಚೆಸ್ ಪಂದ್ಯಾಟ

0

ಆಲಂಕಾರು:ಶ್ರೀ ಭಾರತಿ ವಿದ್ಯಾಸಂಸ್ಥೆ ಆಲಂಕಾರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇದರ ಕಡಬ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಚೆಸ್ ಪಂದ್ಯಾಟ ಆ.7ರಂದು ನಡೆಯಿತು.

ಪಂದ್ಯಾಟದ ಉದ್ಘಾಟನೆಯನ್ನು ಆಲಂಕಾರು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಸುಶೀಲ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಗಂಗಾಧರ ಗೌಡ ಕುಂಡಡ್ಕ ವಹಿಸಿದ್ದರು.ಪುತ್ತೂರು ತಾಲೂಕು ದೈಹಿಕಶಿಕ್ಷಣಾಧಿಕಾರಿ ಚಕ್ರಪಾಣಿ ಬಾಗಿಲ, ನೋಡಲ್ ಅಧಿಕಾರಿಗಳಾದ ಲೋಕೇಶ್, ಚಂದ್ರಶೇಖರ, ಶ್ರೀ ಭಾರತಿ ಶಾಲಾ ಆಂಗ್ಲ ವಿಭಾಗದ ಮುಖ್ಯಸ್ಥ ಸತೀಶ್ ಕುಮಾರ್ ಜಿ. ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಕನ್ನಡ ಮಾಧ್ಯಮ ವಿಭಾಗದ ಮುಖ್ಯ ಶಿಕ್ಷಕಿ ಆಶಾ ಎಸ್. ರೈ ಸ್ವಾಗತಿಸಿ,ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ವಂದಿಸಿದರು. ಶಿಕ್ಷಕ ಚಂದ್ರಹಾಸ ಕೆ. ಸಿ ಮತ್ತು ಶಿಶುಮಂದಿರದ ಮುಖ್ಯ ಶಿಕ್ಷಕಿ ಶಾಲಿನಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here