ನಾಳೆ(ಆ.9) ಪರ್ಪುಂಜ ರಾಮಜಾಲು ಗರಡಿಯಲ್ಲಿ ನಾಗರ ಪಂಚಮಿ ಆಚರಣೆ

0

ಪುತ್ತೂರು: ರಾಮ ಲಕ್ಷ್ಮಣರು ಅಡ್ಡಾಡಿದ ಪ್ರದೇಶ, ತುಳುನಾಡಿನ ವೀರಪುರುಷರಾದ ಕೋಟಿ ಚೆನ್ನಯರು ನಡೆದಾಡಿದ ಪುಣ್ಯ ಭೂಮಿ ಎಂದೇ ಕರೆಸಿಕೊಂಡಿರುವ ಒಳಮೊಗ್ರು ಗ್ರಾಮದ ಪರ್ಪುಂಜ ರಾಮಜಾಲುವಿನಲ್ಲಿ ಕಾರಣಿಕತೆ ಮೆರೆಯುತ್ತಿರುವ ಶ್ರೀ ಬ್ರಹ್ಮಬೈದೇರ್ಕಳ ಗರಡಿಯಲ್ಲಿ ಆ.9 ರಂದು ನಾಗರ ಪಂಚಮಿ ಆಚರಣೆ ನಡೆಯಲಿದೆ.

ಬೆಳಿಗ್ಗೆ ಶ್ರೀ ನಾಗದೇವರಿಗೆ ಸಿಯಾಳಭಿಷೇಕ, ಹಾಲಿನ ಅಭಿಷೇಕ ನಡೆಯಲಿದೆ. ಗ್ರಾಮಸ್ಥರು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ಗರಡಿಯ ಆಡಳಿತ ಮೊಕ್ತೇಸರ ಕೆ.ಸಂಜೀವ ಪೂಜಾರಿ ಕೂರೇಲು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here