ಕರಾಟೆ ಸ್ಪರ್ಧೆ: ಕಡಬ ಸರಸ್ವತಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾಂತೀಯ ಮಟ್ಟಕ್ಕೆ ಆಯ್ಕೆ

0

ಕಡಬ: ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ, ಇಂದ್ರಪ್ರಸ್ಥ ವಿದ್ಯಾ ಸಂಸ್ಥೆಗಳು ಉಪ್ಪಿನಂಗಡಿ ಇದರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ನಿಶ್ವಿತ್ ಪಿ 10ನೇ ತರಗತಿ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕೀರ್ತಿ ಜೆ ರೈ 8ನೇ ತರಗತಿ ಪ್ರಥಮ ಸ್ಥಾನವನ್ನು ಪಡೆದು, ಮುಂದೆ ಬೆಂಗಳೂರಿನಲ್ಲಿ ನಡೆಯುವ ಪ್ರಾಂತೀಯ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಡ್ಯಾಲಿ 9ನೇ ತರಗತಿ ಹಾಗೂ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಪವನ್ 8ನೇ ತರಗತಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ಕರಾಟೆ ಶಿಕ್ಷಕರಾದ ಯಾದವ ಬೀರಂತಡ್ಕ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಲಕ್ಷ್ಮೀಶ ಗೌಡ ಆರಿಗ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here