ಕರಾಟೆ ಸ್ಪರ್ಧೆ – ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸಂತ ವಿಕ್ಟರನ ಬಾಲಿಕ ಪ್ರೌಢ ಶಾಲೆ, ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

17ರ ವಯೋಮಾನದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ನೂತನ್ ಪ್ರಥಮ ಸ್ಥಾನ, ಪ್ರಾಪ್ತ (10ನೇ) ಪ್ರಥಮ ಸ್ಥಾನ, ಅಕ್ಷಯ್.ಕೆ.ಕೆ (10ನೇ) ದ್ವಿತೀಯ ಸ್ಥಾನ, ಚಿಂತನ್ (8ನೇ) ದ್ವಿತೀಯ ಸ್ಥಾನ, ಪಡೆದಿರುತ್ತಾರೆ. 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ವರ್ಷಿ ರೈ (8ನೇ) ದ್ವಿತೀಯ ಸ್ಥಾನ, ಭವಿಷಾ.ಕೆ (10ನೇ) ದ್ವಿತೀಯ ಸ್ಥಾನ, ದೀಕ್ಷಾ.ಬಿ (9ನೇ) ದ್ವಿತೀಯ ಸ್ಥಾನ ಪಡೆದಿರುತ್ತಾರೆ. 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಅವಿ.ವಿ.ರೈ(7ನೇ) ದ್ವಿತೀಯ ಸ್ಥಾನ ಪಡೆದಿರುತ್ತಾರೆ.

14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಅಭಿಜ್ಞಾ ಶಾಂಭವಿ(7ನೇ)  ಪ್ರಥಮ ಸ್ಥಾನ, ಕೆ.ಪಿ.ಲಹರಿ ರೈ(6ನೇ) ಪ್ರಥಮ ಸ್ಥಾನ, ಮಹತಿ.ಎಂ(7ನೇ) ದ್ವಿತೀಯ ಸ್ಥಾನ ಪಡೆದಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here