ನರಿಮೊಗರು: ಹೊಲಿಗೆ ತರಬೇತಿ ಕಾರ್ಯಾಗಾರ ಉದ್ಘಾಟನೆ

0

ಬ್ಯಾಂಕ್ ಆಫರ್ ಬರೋಡ ಪ್ರಾಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಎನ್‌ಆರ್‌ಎಲ್‌ಎಂ ತಾಲೂಕು ಅಭಿಯಾನ ನಿರ್ವಹಣಾ ಘಟಕ ಪುತ್ತೂರು, ಗ್ರಾಮ ಪಂಚಾಯತ್ ನರಿಮೊಗರು ಮತ್ತು ಶ್ರೀ ದುರ್ಗಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ನರಿಮೊಗರು ಇದರ ಜಂಟಿ ಆಶ್ರಯದಲ್ಲಿ ಹೊಲಿಗೆ ತರಬೇತಿ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮ ಆ.7ರಂದು ನರಿಮೊಗರು ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು.


ನರಿಮೊಗರು ಗ್ರಾ.ಪಂ.ಅಧ್ಯಕ್ಷೆ ಹರಿಣಿ ಸಮಾರಂಭದ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ಶೆಟ್ಟಿ ಅವರು ಉದ್ಘಾಟಿಸಿ ಮಾತನಾಡಿ, ಎಲ್ಲಾ ಶಿಬಿರಾರ್ಥಿಗಳು ಸ್ವ ಉದ್ಯೋಗ ಮಾಡಬೇಕು ಎಂದು ಹೇಳಿದರು.

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಜೀವನ್ ಕೊಲ್ಯ ಅವರು ಕಾರ್ಯಾಗಾರದ ನಿಯಮ, ಯೋಜನೆ, ಸ್ವ ಉದ್ಯೋಗಕ್ಕೆ ಸಿಗುವ ಬ್ಯಾಂಕ್ ಸೌಲಭ್ಯ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಬ್ಯಾಂಕ್ ಆಫ್ ಬರೋಡ ಇದರ ಪುತ್ತೂರು ಶಾಖಾ ವ್ಯವಸ್ಥಾಪಕ ಸಾಧಿಕ್ ಅವರು ಬ್ಯಾಂಕ್‌ನಿಂದ ಸಿಗುವ ಸಾಲ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು.


ಮುಖ್ಯ ಅತಿಥಿಯಾಗಿದ್ದ ಪುತ್ತೂರು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ, ನರಿಮೊಗರು ಗ್ರಾ.ಪಂ.ಉಪಾಧ್ಯಕ್ಷ ಉಮೇಶ್ ಶುಭಹಾರೈಸಿದರು. ನರಿಮೊಗರು ಗ್ರಾ.ಪಂ.ಕಾರ್ಯದರ್ಶಿ ಕಲಂದರ್, ಶ್ರೀ ದುರ್ಗಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಅಧ್ಯಕ್ಷೆ ಪೂರ್ಣಿಮ, ತರಬೇತುದಾರರಾದ ಪ್ರೀತಿ ಆಚಾರ್ಯ, ಕೃಷಿಯೇತರ ಚಟುವಟಿಕೆ ತಾಲೂಕು ವ್ಯವಸ್ಥಾಪಕಿ ನಳಿನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೃಷಿ ಸಖಿ ಭಾರತಿ ನಿರೂಪಿಸಿದರು. ಸಂಜೀವಿನಿ ಮುಖ್ಯ ಪುಸ್ತಕ ಬರಹಗಾರರಾದ ಅನುರಾಧ ಪ್ರಭು ಸ್ವಾಗತಿಸಿದರು. ಸ್ಥಳೀಯ ಸಂಪನ್ಮೂಲ ವ್ಯಕ್ತಿ ಸುನೀತಾ ವಂದಿಸಿದರು. ಕಾರ್ಯ ಕ್ರಮದಲ್ಲಿ ಸಂಜೀವಿನಿ ಸದಸ್ಯರು, ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ಮತ್ತು ಶಿಬಿರಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here