ಪುತ್ತೂರು ಭೂಕುಸಿತ ಪ್ರದೇಶಗಳಿಗೆ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾದ ತಜ್ಞರ ಭೇಟಿ – ಅಧ್ಯಯನ

0

ಪುತ್ತೂರು: ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾದ ಅಧ್ಯಯನ ತಂಡ ಪುತ್ತೂರಿನಲ್ಲಿ ನಡೆದ ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆ.8ರಂದು ಪುತ್ತೂರಿಗೆ ಬಂದ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾದ ತಜ್ಞ ಸೆಂಥಿಲ್ ಮತ್ತು ಇನ್ನೋರ್ವ ತಜ್ಞ ಪುತ್ತೂರಿನ ಬೈಪಾಸ್ ರಸ್ತೆ ಮತ್ತು ಕೆಮ್ಮಿಂಜೆ ಗ್ರಾಮದ ಪುತ್ರಮೂಲೆ ಸಹಿತ ಹಲವು ಕಡೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಮಣ್ಣು ಪರೀಕ್ಷೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಪುತ್ತೂರು ತಹಶೀಲ್ದಾರ್ ಪುರಂದರ, ಜಿಲ್ಲಾ ವಿಪತ್ತು ನಿರ್ವಹಣೆಯ ಅಧಿಕಾರಿ ವಿಜಯ ಕುಮಾರ್ ಮತ್ತು ಎನ್‌ಡಿಆರ್‌ಎಫ್ ತಂಡದವರು ಜೊತೆಗಿದ್ದರು. ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್ ಅವರು ಭೂಕುಸಿತ, ಧರೆ ಕುಸಿತ ಸಂಭವಿಸಿದ ಸ್ಥಳಗಳ ಕುರಿತು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here