ಮುಂಡೂರು ಪ್ರಾಥಮಿಕ ಹಿರಿಯ ವಿದ್ಯಾರ್ಥಿ ಸಂಘ- ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ, ಪ್ರ.ಕಾರ್ಯದರ್ಶಿ: ಅಶೋಕ ಅಂಬಟ, ಕೋಶಾಧಿಕಾರಿ: ಅಕ್ಬರ್ ಶಾಫಿ

0

ಪುತ್ತೂರು: ಮುಂಡೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಪುನರ್ ರಚನೆಯನ್ನು ಮಾಡಲಾಯಿತು. ಅಧ್ಯಕ್ಷರಾಗಿ ಬಾಲಕೃಷ್ಣ ರೈ, ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ ಅಂಬಟ ಹಾಗೂ ಕೋಶಾಧಿಕಾರಿಯಾಗಿ ಅಕ್ಬರ್ ಶಾಫಿ ಆಯ್ಕೆಯಾದರು.

ಶಾಲಾ ಮುಖ್ಯಗುರು ವಿಜಯ ಪಿ ಅವರು ಹಿರಿಯ ವಿದ್ಯಾರ್ಥಿ ಸಂಘದ ಅವಶ್ಯಕತೆಯ ಬಗ್ಗೆ ಪ್ರಾಸ್ತಾವಿಕಾಗಿ ಮಾತುಗಳನ್ನಾಡಿ ಸ್ವಾಗತಿಸಿದರು. ಟಿಜಿಟಿ ಶಿಕ್ಷಕ ರವೀಂದ್ರ ಶಾಸ್ತ್ರಿ ವಂದಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಕೋಶಾಧಿಕಾರಿಯಾಗಿದ್ದ ಶಶಿಕಲಾ ಟಿ ಉಪಸ್ಥಿತರಿದ್ದರು. ಸಹ ಶಿಕ್ಷಕ ಅಬ್ದುಲ್ ಬಶೀರ್ ಕೆಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here