ಚೆಸ್ ಸ್ಪರ್ಧೆಯಲ್ಲಿ ಕಡಬ ಸರಸ್ವತೀ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

0

ಕಡಬ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಆಯೋಜಿಸಿದ ಶ್ರೀ ಭಾರತಿ ಪ್ರಾಥಮಿಕ ಶಾಲೆ ಆಲಂಕಾರು ಇಲ್ಲಿ ನಡೆದ ಕಡಬ ವಲಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಅಶ್ವಿನಿ ಕೆ 8ನೇ ತರಗತಿ ಪ್ರಥಮ ಸ್ಥಾನ ಹಾಗೂ 17ರ ವಯೋಮಾನ ಬಾಲಕರ ವಿಭಾಗದಲ್ಲಿ ಭವಿಷ್ ಪಿ ಆರ್ 10ನೇ ತರಗತಿ ತೃತೀಯ ಸ್ಥಾನವನ್ನು ಪಡೆದು ಆ.14ರಂದು ನೆಲ್ಯಾಡಿ ಹೊಸಮಜಲು ಶಾಲೆಯಲ್ಲಿ ನಡೆಯುವ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ಸಂಸ್ಥೆ ದೈಹಿಕ ಶಿಕ್ಷಣ ಶಿಕ್ಷಕರಾದ ಲಕ್ಷ್ಮೀಶ ಗೌಡ ಆರಿಗ ಮಾರ್ಗದರ್ಶನವನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here