ಶ್ರೀರಾಮಕುಂಜೇಶ್ವರ ಕ.ಮಾ ಪ್ರೌಢಶಾಲೆಯ ಬಾಲಕಿಯರ ತಂಡಕ್ಕೆ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಸಮಗ್ರ ಪ್ರಶಸ್ತಿ

0

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಇದರ ಸಹಭಾಗಿತ್ವದಲ್ಲಿ ಶ್ರೀ ಭಾರತಿ ವಿದ್ಯಾಸಂಸ್ಥೆಗಳು ಅಲಂಕಾರು, ಇಲ್ಲಿ ನಡೆದ ಕಡಬ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡವು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಹತ್ತನೇ ತರಗತಿಯ ಝಾಹಿದ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಶಾಲಾ ವಿದ್ಯಾರ್ಥಿಗಳಿಗೆ ಮುಖ್ಯ ಗುರು ಸತೀಶ್ ಭಟ್ ಅವರು ತರಬೇತಿಯನ್ನು ನೀಡಿದ್ದರು. ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಶಾಲಾ ಶಿಕ್ಷಕ ವೃಂದ ಸಹಕರಿಸಿದ್ದರು.

LEAVE A REPLY

Please enter your comment!
Please enter your name here