ಕೂರೇಲು ನಾಗ ಸಾನಿಧ್ಯದಲ್ಲಿ ನಾಗರ ಪಂಚಮಿ ಆಚರಣೆ

0

ಪುತ್ತೂರು: ಆರ್ಯಾಪು ಗ್ರಾಮದ ಕೂರೇಲು ಕುಟುಂಬದ ತರವಾಡು ಮನೆಯ ಶ್ರೀ ನಾಗ ಸಾನಿಧ್ಯದಲ್ಲಿ ನಾಗರ ಪಂಚಮಿ ಆಚರಣೆ ನಡೆಯಿತು.

ಅರ್ಚಕ ಪ್ರಕಾಶ್ ನಕ್ಷತ್ರಿತ್ತಾಯರವರ ನೇತೃತ್ವದಲ್ಲಿ ಶ್ರೀ ನಾಗ ದೇವರಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ ಹಾಗೂ ನಾಗ ತಂಬಿಲ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಕೂರೇಲು ಕುಟುಂಬದ ತರವಾಡು ಮನೆಯ ನೂರಾರು ಮಂದಿ ಶ್ರೀ ನಾಗದೇವರಿಗೆ ಹಾಲು, ಸೀಯಾಳ ಅರ್ಪಿಸಿದರು.

ಕೂರೇಲು ಕುಟುಂಬಸ್ಥರು, ಬಂಧು ಮಿತ್ರರು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು. ಕೂರೇಲು ಶ್ರೀ ಮಲರಾಯ ದೈಸ್ಥಾನದ ಆಡಳಿತ ಮೊಕ್ತೇಸರ ಕೆ.ಸಂಜೀವ ಪೂಜಾರಿ ಕೂರೇಲು ಭಕ್ತಾಧಿಗಳನ್ನು ಸ್ವಾಗತಿಸಿ, ಪ್ರಸಾದ ನೀಡಿ ಸತ್ಕರಿಸಿದರು.

LEAVE A REPLY

Please enter your comment!
Please enter your name here