ಆ.22-29: ಪುಣ್ಚಪ್ಪಾಡಿಯಲ್ಲಿ ಮದ್ಯವರ್ಜನ ಶಿಬಿರ- ಡಾ.ಹೆಗ್ಗಡೆ ಅವರಿಂದ ಆಮಂತ್ರಣ ಬಿಡುಗಡೆ

0

ಸವಣೂರು: ಪುಣ್ಚಪ್ಪಾಡಿ ನೇರೋಳ್ತಡ್ಕದ ಗೌರಿ ಸದನದಲ್ಲಿ ಆ.22 – 29ರ ತನಕ ನಡೆಯಲಿರುವ ಮಧ್ಯವರ್ಜನ ಶಿಬಿರದ ಆಮಂತ್ರಣ ಪತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸಚಿನ್ ಕುಮಾರ್ ಜೈನ್, ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ.ಸವಣೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು, ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳಾದ ಗಿರಿಶಂಕರ ಸುಲಾಯ, ಸತೀಶ್ ಬಲ್ಯಾಯ, ಚೇತನ್ ಕೋಡಿಬೈಲು, ಗ್ರಾಮಾಭಿವೃದ್ದಿ ಯೋಜನೆಯ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here