ಬಡಗನ್ನೂರು: ಪಡುಮಲೆ ನಾಗರಪಂಚಮಿ ಆಚರಣೆ

0

ಬಡಗನ್ನೂರು: ಪಡುಮಲೆ ಎರುಕೊಟ್ಯ ನಾಗ ಸಾನಿಧ್ಯದಲ್ಲಿ ಪಡುಮಲೆ ಕೋಟಿ ಚೆನ್ನಯ ಸಂಚಲನ ಸಮಿತಿ ವತಿಯಿಂದ ನಾಗರ ಪಂಚಮಿ ಆಚರಣೆ ಅ.9ರಂದು ನಡೆಯಿತು.

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ನೇತೃತ್ವದಲ್ಲಿ  ಶ್ರೀ ನಾಗದೇವರಿಗೆ  ಹಾಲು ಹಾಗೂ ಸೀಯಾಳ ಅಭಿಷೇಕ ಮಾಡಿ, ನಾಗದೇವರಿಗೆ ಹಾಗೂ ನಾಗಬಿರ್ಮೆರಿಗೆ ತಂಬಿಲ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಸಮಿತಿ ಆಡಳಿತ ಮೂಕ್ತೇಸರ ವಿನೋದ್ ಆಳ್ವ ಮೂಡಾಯೂರು ಹಾಗೂ ಸಮಿತಿ ಪದಾಧಿಕಾರಿಗಳು ಮತ್ತು ಊರಿನವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here