ಕೋಲ್ಪೆ: ನಿಂತಿದ್ದ ಈಚರ್ ಲಾರಿಗೆ ಬೈಕ್ ಡಿಕ್ಕಿ-ಸವಾರನಿಗೆ ಗಂಭೀರ ಗಾಯ

0

ನೆಲ್ಯಾಡಿ: ಕೆಟ್ಟು ನಿಂತಿದ್ದ ಈಚರ್ ಲಾರಿಯೊಂದಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೋಲ್ಪೆ ಸೇತುವೆ ಸಮೀಪ ಆ.9ರಂದು ರಾತ್ರಿ ನಡೆದಿದೆ.


ಗಾಯಗೊಂಡಿರುವ ಬೈಕ್ ಸವಾರನನ್ನು ನೆಲ್ಯಾಡಿ ಗ್ರಾಮದ ಮಾದೇರಿಯ ನಿವಾಸಿ ಸತೀಶ ಎಂದು ಗುರುತಿಸಲಾಗಿದೆ. ಸತೀಶ ಅವರು ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯ ಕೋಲ್ಪೆಯಲ್ಲಿ ಕೆಟ್ಟು ನಿಂತಿದ್ದ ಈಚರ್ ಲಾರಿಗೆ ಬೈಕ್ ಡಿಕ್ಕಿಯಾಗಿದೆ. ಘಟನೆಯಲ್ಲಿ ಸತೀಶ್ ಅವರು ಗಂಭೀರಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here